ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದೇಶದ ಪ್ರತಿಯೊಬ್ಬ ಜನರ ಹೃದಯವನ್ನು ಸ್ಪರ್ಶಿಸುವ ಸಕಾರಾತ್ಮಕತೆಯ ದಾರಿದೀಪ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಬಣ್ಣಿಸಿದ್ದಾರೆ.
ಕಾರ್ಯಕ್ರಮವನ್ನು ವೈವಿಧ್ಯತೆಯ ಪುಷ್ಪಗುಚ್ಛ ಎಂದು ಬಣ್ಣಿಸಿದ ಅವರು, ಆಕಾಶವಾಣಿಯಲ್ಲಿನ ಈ ಕಾರ್ಯಕ್ರಮವು ರಾಜಕೀಯೇತರವಾಗಿದೆ ಎಂದಿದ್ದಾರೆ.
ನವದೆಹಲಿಯಲ್ಲಿ ಮನ್ ಕಿ ಬಾತ್ @100 ರ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಧನಖರ್ ಮಾತನಾಡಿದ್ದು, ಮಾಸಿಕ ಕಾರ್ಯಕ್ರಮವು ತನ್ನ ಪ್ರಯಾಣದಲ್ಲಿ ಹಲವಾರು ಸಮಸ್ಯೆಗಳನ್ನು ಒಳಗೊಂಡಿದೆ. ಈ ಕಾರ್ಯಕ್ರಮ ನಾಗರಿಕತೆಯ ಪ್ರತಿಬಿಂಬವಾಗಿದೆ. ಇದು ದೇಶದ ಮೂಲೆ ಮೂಲೆಯನ್ನು ತಲುಪುತ್ತದೆ ಮತ್ತು ರೇಡಿಯೊಗೆ ಹೊಸ ಜೀವನವನ್ನು ನೀಡಿದೆ ಎಂದಿದ್ದಾರೆ.
ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಪ್ರಧಾನಿಯವರು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಅವರು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ನಾಗರಿಕರ ಸಾಧನೆಗಳನ್ನು ತಿಳಿಸುತ್ತಾರೆ. ಈ ಕಾರಣಕ್ಕಾಗಿಯೇ ಮೋದಿ ಅವರು ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಒಬ್ಬರು ಎಂದು ಅವರು ಹೇಳಿದರು.
ಇದೇ ತಿಂಗಳ 30ರಂದು ಮನ್ ಕಿ ಬಾತ್ 100 ಸಂಚಿಕೆಗಳನ್ನು ಪೂರೈಸಲಿದ್ದು, ಈ ಸಂಚಿಕೆಗಾಗಿ ಜನರು ಕಾತರದಿಂದ ಕಾಯುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪ್ರಸಾರ ಭಾರತಿಯ ಮಾಜಿ ಸಿಇಒ ಎಸ್.ಎಸ್.ವೆಂಪತಿ ಅವರು ರಚಿಸಿರುವ ʼಕಲೆಕ್ಟಿವ್ ಸ್ಪಿರಿಟ್, ಕಾಂಕ್ರೀಟ್ ಆಕ್ಷನ್ ಎಂಬ ಪುಸ್ತಕವನ್ನು ಧನಖರ್ ಬಿಡುಗಡೆ ಮಾಡಿದರು. ಅಲ್ಲದೇ ಕಾಫಿ ಟೇಬಲ್ ಪುಸ್ತಕ ‘ಮೈ ಡಿಯರ್ ಫೆಲೋ ಸಿಟಿಜನ್ಸ್’ ಅನ್ನು ಬಿಡುಗಡೆ ಮಾಡಿದರು. ಈ ಪುಸ್ತಕವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊರತಂದಿದೆ, ಇದು ಪ್ರಧಾನ ಮಂತ್ರಿಯವರ ರೇಡಿಯೊ ಕಾರ್ಯಕ್ರಮದಲ್ಲಿ ಉಲ್ಲೇಖಿಸಲಾದ 100 ಕ್ಕೂ ಹೆಚ್ಚು ಸ್ಪೂರ್ತಿದಾಯಕ ಕಥೆಗಳ ನೋಟವನ್ನು ಪ್ರಸ್ತುತಪಡಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.