ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ನರೇಂದ್ರಮೋದಿ ಅವರ ಬಗ್ಗೆ ನೀಡಿರುವ ಹೇಳಿಕೆಯನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ, ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರ್ಗೆಯವರು ಇಂದು ‘ನರೇಂದ್ರಮೋದಿ ವಿಷದ ಹಾವು. ಆ ಹಾವಿನ ವಿಷ ನೆಕ್ಕಿದರೆ ಸತ್ತಂತೆ. ಮಲಗಿಬಿಡ್ತೀರಾ.’ ಎಂದಿದ್ದಾರೆ. ರಾಜಕೀಯ ಜೀವನದಲ್ಲಿರುವವರು ಮರ್ಯಾದೆ ಕಾಪಾಡಿಕೊಳ್ಳಬೇಕು. ಅನುಭವಿ ವ್ಯಕ್ತಿಯೊಬ್ಬರು ಪ್ರಧಾನಿಯವರ ವಿರುದ್ಧ ರೀತಿಯ ನಿಂದನೆ ಮಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹುದಲ್ಲ ಎಂದು ಆಕ್ಷೇಪಿಸಿದರು.
ಪ್ರಧಾನಿಯವರು ಖರ್ಗೆಯವರನ್ನು ಎಲ್ಲ ರೀತಿಯಲ್ಲಿ ಗೌರವಿಸುತ್ತಾರೆ. ಆದರೆ, ಖರ್ಗೆಯವರು ತಮ್ಮ ರಾಜಕೀಯ ನಾಯಕರನ್ನು ಸಂತುಷ್ಟಗೊಳಿಸಲು ಇಂತಹ ಪದಗಳ ಬಳಕೆ ಮಾಡಿದ್ದಾರೆ. ಖರ್ಗೆಯವರ ಹೇಳಿಕೆ ಅಸಂಸದೀಯ, ಅನಾಗರಿಕ ಮತ್ತು ಅಸ್ವೀಕಾರ್ಹ ಎಂದು ಅವರು ಹೇಳಿದರು.
ಸುಸಂಸ್ಕೃತ ಕರ್ನಾಟಕ, ಸಾಧು, ಸಂತರ, ಸಾಧಕರ ನಾಡಾಗಿದೆ. ನಾಡಿನ ಗಣ್ಯರು ಮೋದಿಯವರನ್ನು ಪ್ರಶಂಸಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ರಾಜಕೀಯಕ್ಕಾಗಿ ಪ್ರಧಾನಿಯವರನ್ನು ನಿಂದಿಸುವ ಹೇಳಿಕೆಗಳನ್ನು ನಿರಂತರ ನೀಡುತ್ತಿದ್ದಾರೆ. ಖರ್ಗೆಯವರು ನೀಡಿರುವ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಧಮೇಂದ್ರ ಪ್ರಧಾನ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.