ನವದೆಹಲಿ: ನಿಷೇಧಕ್ಕೆ ಒಳಗಾಗಿರುವ ಉಗ್ರ ಸಂಘಟನೆ ಜೈಶೇ-ಇ-ಮೊಹಮ್ಮದ್ನ್ನು ಪುನಶ್ಚೇತನಗೊಳಿಸಲು ಪಾಕಿಸ್ಥಾನದ ಗುಪ್ತಚರ ಇಲಾಖೆ ಐಎಸ್ಐ ಮುಂದಾಗಿದೆ ಎಂದು ಭಾರತೀಯ ಗುಪ್ತಚರ ಇಲಾಖೆಯ ವರದಿ ತಿಳಿಸಿದೆ.
ಜಮ್ಮು ಕಾಶ್ಮೀರ ಸೇರಿದಂತೆ ಇತರ ಭಾಗಗಳಲ್ಲಿ ಭಯೋತ್ಪಾದನ ಕೃತ್ಯಗಳನ್ನು ನಡೆಸುವ ಸಲುವಾಗಿ ಜೈಶೇ-ಇ-ಮೊಹಮ್ಮದ್ನ್ನು ಪುನಶ್ಚೇತನಗೊಳಿಸಲು ಅದು ಮುಂದಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
2001ರಲ್ಲಿ ಸಂಸತ್ತಿನ ಮೇಲೆ ನಡೆದ ದಾಳಿಯಲ್ಲಿ ಜೈಶೇ-ಇ-ಮೊಹಮ್ಮದ್ ಕೈವಾಡವಿತ್ತು.
ಪಾಕಿಸ್ಥಾನದಲ್ಲಿ ಹಲವು ಭಯೋತ್ಪಾದನ ದಾಳಿಗಳನ್ನು ನಡೆಸಿದ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ 2002ರಲ್ಲಿ ಈ ಸಂಘಟನೆಗೆ ನಿಷೇಧ ಹೇರಿತ್ತು. ಆದರೂ ತೆರೆಮರೆಯಲ್ಲಿ ಇದು ಚಟುವಟಿಕೆಗಳನ್ನು ನಡೆಸಿತ್ತು.
ಇದೀಗ ಆ ಸಂಘಟನೆಯನ್ನು ಪುನಶ್ಚೇತನಗೊಳಿಸಿ ಭಾರತದ ವಿರುದ್ಧ ಛೂ ಬಿಡಲು ಐಎಸ್ಐ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.