ನವಲಗುಂದ: ಪ್ರಧಾನಿ ಮೋದಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ, ಜನತೆಗೆ ಅವರ ಮೇಲೆ ಅಚಲವಾದ ನಂಬಿಕೆ ಇದೆ. ಆದರೆ ಅಂತಹ ಪ್ರಧಾನಿಯನ್ನು ಕಾಂಗ್ರೆಸ್ಸಿಗರು ಪದೇ ಪದೇ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದಾರೆ. ಕೆಲವೊಮ್ಮೆ ಸಾವಿನ ವ್ಯಾಪಾರಿ ಎಂದು ಕಕೆಲವೊಮ್ಮೆ ವಿಷದ ಹಾವು ಎಂದು ಜರೆಯುತ್ತಿದ್ದಾರೆ. ಜನರೇ ಕಾಂಗ್ರೆಸ್ಸಿಗರ ಈ ನಿಂದನೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು.
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರನ್ನು ವಿಶ್ವದಾದ್ಯಂತ ಅತ್ಯಂತ ಗೌರವದಿಂದ ಸ್ವಾಗತಿಸಲಾಗುತ್ತದೆ. ಎಷ್ಟೇ ನಿಂದಿಸಿದ್ದರೂ ಪ್ರಧಾನಿ ಅವರ ಬೆಂಬಲ ಹೆಚ್ಚಾಗುತ್ತಿರುವುದರಿಂದ ಕಾಂಗ್ರೆಸ್ ಇಂತಹ ಹೇಳಿಕೆಗಳಿಂದ ಜನರನ್ನು ಪ್ರಚೋದಿಸಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ಗೆ ವಿಚಾರಗಳ ಕೊರತೆಯಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ವಿಶ್ವದಾದ್ಯಂತ ಭಾರತದ ಹೆಮ್ಮೆಯನ್ನು ಹೆಚ್ಚಿಸಿ ದೇಶವನ್ನು ಸಮೃದ್ಧಗೊಳಿಸಲು ಶ್ರಮಿಸಿದ್ದಾರೆ. ದೇಶದ ಮೂಲಸೌಕರ್ಯವನ್ನು ಬಲಪಡಿಸಿದ್ದಾರೆ. ಗಡಿಗಳನ್ನು ಸುರಕ್ಷಿತವಾಗಿ ಮಾಡಿದ್ದಾರೆ. ಮೋದಿಜಿ ಪ್ರಪಂಚದಾದ್ಯಂತ ಎಲ್ಲಿಗೆ ಹೋದರೂ ಜನರು ‘ಮೋದಿ-ಮೋದಿ’ ಘೋಷಣೆಗಳೊಂದಿಗೆ ಸ್ವಾಗತಿಸುತ್ತಾರೆ ಎಂದು ಶಾ ಹೇಳಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬಹುದೇ ಎಂದು ಖರ್ಗೆ ಅವರನ್ನು ಕೇಳಲು ಬಯುತ್ತೇನೆ. ಇದೇ ರೀತಿಯ ಹೇಳಿಕೆ ನೀಡುವ ಕಾಂಗ್ರೆಸ್ ನಾಯಕರು ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಮೋದಿಯನ್ನು ಎಷ್ಟು ನಿಂದಿಸಿದರೂ ಕಮಲ ಅರಳುತ್ತದೆ.ಮೋದಿಯನ್ನು ನಿಂದಿಸುವ ಮೂಲಕ ಕಾಂಗ್ರೆಸ್ ಕರ್ನಾಟಕದ ಜನರನ್ನು ಪ್ರಚೋದಿಸಲು ಸಾಧ್ಯವಿಲ್ಲ ,ನೀವು ಮೋದಿಯನ್ನು ನಿಂದಿಸಿದರೆ ಅವರಿಗೆ ಬೆಂಬಲ ಹೆಚ್ಚಾಗುತ್ತದೆ ಎಂದು ಶಾ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.