ನವದೆಹಲಿ: ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಎಎಪಿ, ಮತ್ತು ಜೆಡಿ (ಎಸ್) ನ ಉನ್ನತ ನಾಯಕರು ಭರ್ಜರಿ ಪ್ರಚಾರ ಮತ್ತು ರೋಡ್ಶೋಗಳು ಕಂಡುಬರುತ್ತವೆ.
ಎರಡು ದಿನಗಳ ಚುನಾವಣಾ ಪ್ರಚಾರದ ಎರಡನೇ ಹಂತವಾಗಿ ಇಂದು ಮೇ 2 ರಂದು ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಸಮಾವೇಶಕ್ಕೆ ನೆರೆದ ಬೃಹತ್ ಜನಸ್ತೋಮವು ಕರ್ನಾಟಕದ ಜನರ ನಿರ್ಧಾರಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿಯ ಸರ್ಕಾರ ಬಹುಮತದ ಸರ್ಕಾರ. ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಎಂದಿಗೂ ಪೈಪೋಟಿ ನೀಡುವುದಿಲ್ಲ, ರಾಜ್ಯವನ್ನು ನಂಬರ್ 1 ಮಾಡಲು ಕರ್ನಾಟಕದಲ್ಲಿ ತಮ್ಮ ಪಕ್ಷವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೋರಾಡುತ್ತಿದೆ ಎಂದಿದ್ದಾರೆ.
ಭಯೋತ್ಪಾದಕರನ್ನು ಓಲೈಸುವ ಇತಿಹಾಸ ಕಾಂಗ್ರೆಸ್ಗೆ ಇದೆ ಎಂದ ಪ್ರಧಾನಿ, ಭಯೋತ್ಪಾದನೆಯನ್ನು ಉತ್ತೇಜಿಸುವ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ರಾಜ್ಯಕ್ಕೆ ಯಾವತ್ತೂ ಪ್ರಯೋಜನವಾಗುವುದಿಲ್ಲ. ಕರ್ನಾಟಕ ಅಭಿವೃದ್ಧಿ ಹೊಂದಿದ ಭಾರತದ ಪ್ರೇರಕ ಶಕ್ತಿ, ಡಬಲ್ ಇಂಜಿನ್ ಸರ್ಕಾರಕ್ಕೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ಮತ್ತು ಜೆಡಿಎಸ್ ವಂಶಾಡಳಿತ ರಾಜಕೀಯ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿವೆ ಮತ್ತು ಸಮಾಜವನ್ನು ವಿಭಜಿಸುವ ಗುರಿಯನ್ನು ಹೊಂದಿವೆ. ಹೀಗಾಗಿ ಎರಡೂ ಪಕ್ಷಗಳ ರಾಜಕೀಯದ ಬಗ್ಗೆ ಕರ್ನಾಟಕದ ಜನತೆ ಎಚ್ಚರದಿಂದಿರಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.