ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಮಂಗಳವಾರ ಪ್ರಕಟಿಸಿದ್ದಾರೆ.
ದೆಹಲಿಯ ಯಶವಂತರಾವ್ ಚವಾಣ್ ಪ್ರತಿಷ್ಠಾನದಲ್ಲಿ ನಡೆದ ತಮ್ಮ ಆತ್ಮಚರಿತ್ರೆಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪವಾರ್ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಇದನ್ನು ಎನ್ಸಿಪಿ ಕಾರ್ಯಕರ್ತರು ಮತ್ತು ಮುಖಂಡರು ವಿರೋಧಿಸಿದ್ದಾರೆ. “ನಾನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲು ನಿರ್ಧಾರ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ. ಮುಂದಿನ ಕ್ರಮವನ್ನು ಯೋಜಿಸಲು ಪಕ್ಷದ ಹಿರಿಯ ನಾಯಕರ ಸಮಿತಿಯನ್ನು ಪವಾರ್ ಘೋಷಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪವಾರ್ ಅವರನ್ನು ನಿರ್ಧಾರ ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.
ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಕೇಂದ್ರ ರಕ್ಷಣಾ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಪವಾರ್ ಅವರು 2019 ರ ನಂತರ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಆದರೆ, ರಾಜ್ಯಸಭಾ ಸದಸ್ಯರಾಗಿ ಅವರ ಅವಧಿ ಇನ್ನೂ ಮೂರು ವರ್ಷಗಳು ಇದ್ದು, ಸಾಮಾಜಿಕ-ರಾಜಕೀಯಗಳ ಮೂಲಕ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಉಳಿಯುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಪವಾರ್ ಮಹಾರಾಷ್ಟ್ರದ ಬಾರಾಮತಿ ಮೂಲದವರು. ಅವರು ಪ್ರಬಲ ರಾಜಕೀಯ ಕುಟುಂಬ ಸದಸ್ಯ ಮತ್ತು ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿ. ಅವರ ಮಗಳು ಸುಪ್ರಿಯಾ ಸುಳೆ, ಸೋದರಳಿಯ ಅಜಿತ್ ಪವಾರ್ ಸಕ್ರಿಯ ರಾಜಕರಣದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.