ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿರುವ ಪ್ರತಿಕ್ರಿಯೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಿಂದೂ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಸಿಡೆದೆದ್ದಿದ್ದು, ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹನುಮಂತನ ಭಕ್ತರು ಬಂಡಾಯವೆದ್ದರೆ ದೇಶದಿಂದ ಕಾಂಗ್ರೆಸ್ ಬೇರು ಸಮೇತ ಕಿತ್ತು ಹೋಗುತ್ತದೆ ಎಂದಿದ್ದಾರೆ.
ಬಜರಂಗದಳ ಮತ್ತು ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಡುವೆ ಕಾಂಗ್ರೆಸ್ ಹೋಲಿಕೆ ಮಾಡುತ್ತಿರುವುದು ಸಮಂಜಸವಾದ ಕಾರ್ಯವಲ್ಲ ಎಂದು ಹೇಳಿದ್ದಾರೆ.
“ಹನುಮಂತನ ಭಕ್ತರು ಬಂಡಾಯವೆದ್ದರೆ ಕಾಂಗ್ರೆಸ್ ಅನ್ನು ದೇಶದಿಂದ ಕಿತ್ತೊಗೆಯುವ ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಹೀಗಾಗಿ ಬಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.
ಭಜರಂಗ ದಳ ಸಾಮಾಜಿಕ ಮತ್ತು ಧಾರ್ಮಿಕ ಸೇವಾ ಸಂಘವಾಗಿದೆ. ಪಿಎಫ್ಐ ದೇಶದ ವಿರುದ್ಧ ಕೆಲಸ ಮಾಡಿದೆ, ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದೆ ಮತ್ತು ಅವರ ವಿರುದ್ಧ ಅನೇಕ ಪ್ರಕರಣಗಳು ಮತ್ತು ಸಾಕ್ಷ್ಯಗಳಿವೆ. ಆದ್ದರಿಂದ, ಪಿಎಫ್ಐ ಅನ್ನು ಬಜರಂಗದಳದೊಂದಿಗೆ ಹೋಲಿಸುವುದು ಸರಿಯಲ್ಲ. ಪಿಎಫ್ಐ ಅನ್ನು ಈಗಾಗಲೇ ನಿಷೇಧಿಸಲಾಗಿದೆ ಎಂದಿದ್ದಾರೆ.
ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲದಿದ್ದರೂ ಕಾಂಗ್ರೆಸ್ ಭಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ. ಕೇಂದ್ರದಿಂದ ಮಾತ್ರ ಅದು ಸಾಧ್ಯ ಎಂದರು. ಇದೇ ವೇಳೆ ಕಾಂಗ್ರೆಸ್ ಪ್ರಾಣಾಳಿಕೆಯು ಜನರನ್ನು ದಾರಿ ತಪ್ಪಿಸುವ ಪ್ರಣಾಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.