ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಷೋ ಇಂದು ಬೆಂಗಳೂರಿನಲ್ಲಿ ಜನಸಾಗರ, ಜನೋತ್ಸಾಹ, ಸಂಭ್ರಮೋಲ್ಲಾಸದೊಂದಿಗೆ ಆರಂಭವಾಯಿತು. ಸಾವಿರಾರು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ‘ಮೋದಿ ಮೋದಿ’ ಎಂದು ಕೂಗುತ್ತ, ಹೂವಿನ ಸುರಿಮಳೆಗೈಯುತ್ತ ನರೇಂದ್ರ ಮೋದಿಯವರ ರೋಡ್ ಷೋವನ್ನು ಸ್ವಾಗತಿಸಿದರು.
ಸೋಮೇಶ್ವರ ಸಭಾಭವನ ಬಳಿಯಿಂದ ಆರಂಭವಾದ ರೋಡ್ ಷೋವು ಸುಮಾರು 26 ಕಿಮೀ ಕ್ರಮಿಸಲಿದೆ. ಜೆ.ಪಿ. ನಗರ, ಜಯನಗರ, ಸೌತ್ ಎಂಡ್ ಸರ್ಕಲ್, ಮಾಧವರಾವ್ ವೃತ್ತ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ವೃತ್ತ, ಮೈಸೂರು ಸಿಗ್ನಲ್, ಟೋಲ್ ಗೇಟ್ ಸಿಗ್ನಲ್, ಗೋವಿಂದರಾಜನಗರ, ಮಾಗಡಿ ರೋಡ್ ಜಂಕ್ಷನ್, ಶಂಕರ ಮಠ ಸರ್ಕಲ್, ಮಲ್ಲೇಶ್ವರ ಸರ್ಕಲ್, ಸಂಪಿಗೆ ರಸ್ತೆಯ 18ನೇ ಅಡ್ಡರಸ್ತೆ ಜಂಕ್ಷನ್ ಮೂಲಕ ಈ ರೋಡ್ ಷೋ ತೆರಳಲಿದೆ.
ಮೋದಿಯವರನ್ನು ಹತ್ತಿರದಿಂದ ಕಾಣಲು ಮತ್ತು ಪ್ರಧಾನಿಯವರ ವಾಹನ ಮತ್ತು ಮೋದಿಯವರತ್ತ ಹೂವುಗಳನ್ನು ಎಸೆದು ಅವರನ್ನು ಸ್ವಾಗತಿಸಲು ಈ ರಸ್ತೆಯುದ್ದಕ್ಕೂ ಮಕ್ಕಳು, ಹಿರಿಯರು ಸೇರಿ ಅಭಿಮಾನಿಗಳು, ಸಾರ್ವಜನಿಕರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಯುತ್ತಿದ್ದಾರೆ. ಇಂದು ಮತ್ತು ನಾಳೆ ಎರಡು ದಿನಗಳ ರೋಡ್ ಷೋ ನಡೆಯಲಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಅವರು ರೋಡ್ ಷೋ ಸಂದರ್ಭದಲ್ಲಿ ಜೊತೆಗೆ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.