ಮುಂಬಯಿ: ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಮಂಗಳವಾರ ತಮ್ಮ ಚಲನಚಿತ್ರ ದಿ ಕಾಶ್ಮೀರ್ ಫೈಲ್ಸ್ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಟ್ವಿಟರ್ನಲ್ಲಿ ಕಾಶ್ಮೀರ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಬಂಗಾಳ ಮುಖ್ಯಮಂತ್ರಿಗೆ ಕಳುಹಿಸಿದ ಲೀಗಲ್ ನೋಟಿಸ್ ಅನ್ನು ಹಂಚಿಕೊಂಡಿದ್ದಾರೆ ಮತ್ತು “ನಾನು ಅಭಿಷೇಕ್ ಅಗರ್ವಾಲ್ ಮತ್ತು ಪಲ್ಲವಿ ಜೋಶಿ ಅವರೊಂದಿಗೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೇನೆ. ನಮ್ಮನ್ನು ಮತ್ತು ನಮ್ಮ ಚಲನಚಿತ್ರಗಳಾದ ದಿ ಕಾಶ್ಮೀರ್ ಫೈಲ್ಸ್ ಮತ್ತು ಮುಂಬರುವ 2024 ರ ಚಲನಚಿತ್ರ ʼದಿ ಡೆಲ್ಲಿ ಫೈಲ್ಸ್ʼಗೆ ಮಾನಹಾನಿ ಮಾಡುವ ಉದ್ದೇಶದಿಂದ ಮಾಡಿದ ಸುಳ್ಳು ಮತ್ತು ಹೆಚ್ಚು ಮಾನಹಾನಿಕರ ಹೇಳಿಕೆಗಳಿಗಾಗಿ ಈ ನೋಟಿಸ್ ನೀಡಿದ್ದೇನೆ” ಎಂದಿದ್ದಾರೆ.
ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ನೋಟಿಸ್ ಕಳುಹಿಸಿದ ನಂತರ ಅಗ್ನಿಹೋತ್ರಿ ಮಾಧ್ಯಮಗಳ ಜೊತೆ ಮಾತನಾಡಿ, “ಈ ಹಿಂದೆ ಕೆಲವರು ಕಾಶ್ಮೀರ ಫೈಲ್ ಸಿನಿಮಾ ಕೇವಲ ಒಂದು ಪ್ರಚಾರ ಎಂದು ಹೇಳಿದ್ದರು. ಇದನ್ನು ಕೇಳಿ ಕೇಳಿ ನಮಗೆ ಸಾಕಾಗಿದೆ. ಯಾರಾದರೂ ಸಿನಿಮಾವನ್ನು ಪ್ರಚಾರ ಎಂದು ಭಾವಿಸಿದರೆ ಅವರು ಮುಂದೆ ಬಂದು ನಮಗೆ ಸಾಬೀತುಪಡಿಸುವುದು ಉತ್ತಮ” ಎಂದಿದ್ದಾರೆ.
“ಬಂಗಾಳದಲ್ಲಿ ನಡೆದ ನರಮೇಧದ ಕುರಿತಾದ ನನ್ನ ಮುಂದಿನ ಚಿತ್ರವನ್ನು ಬಿಡುಗಡೆಗೂ ಮುನ್ನವೇ ಪ್ರಚಾರ ಎಂದು ಕರೆಯಲಾಗುತ್ತಿದೆ. ಅದಕ್ಕೆ ಬಿಜೆಪಿಯಿಂದ ಹಣ ಬಂದಿದೆ ಎನ್ನುತ್ತಾರೆ. ದಯವಿಟ್ಟು ಕೆಲವು ಪುರಾವೆಗಳನ್ನು ನೀಡಿ” ಎಂದು ಅವರು ಹೇಳಿದ್ದಾರೆ.
BREAKING:
I have, alongwith @AbhishekOfficl & Pallavi Joshi, sent a LEGAL NOTICE to the Chief Minister, Bengal @MamataOfficial for her false & highly defamatory statements made with malafide intention to defame us & our films #TheKashmirFiles & upcoming 2024 film #TheDelhiFiles. pic.twitter.com/G2SjX67UOB
— Vivek Ranjan Agnihotri (@vivekagnihotri) May 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.