ಲಕ್ನೋ: ಬಾಕ್ಸ್ ಆಫೀಸ್ನಲ್ಲಿ ಯಶಸ್ವಿ ಪ್ರದರ್ಶನದ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕರು ಮತ್ತು ತಂಡ ಬುಧವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಂತ್ ಅವರನ್ನು ಭೇಟಿ ಮಾಡಿದೆ.
ಕೇರಳ ಸ್ಟೋರಿ ತಂಡವು ಯೋಗಿ ಆದಿತ್ಯನಾಥ್ ಅವರನ್ನು ಅವರ ಅಧಿಕೃತ ನಿವಾಸ 10, ಲಕ್ನೋದ ಕಾಳಿದಾಸ್ ಮಾರ್ಗ್ನಲ್ಲಿ ಭೇಟಿ ಮಾಡಿದೆ. ಈ ತಂಡದಲ್ಲಿ ನಿರ್ಮಾಪಕ ವಿಪುಲ್ ಅಮೃತ್ಲಾಲ್ ಶಾ, ನಿರ್ದೇಶಕ ಸುದೀಪ್ತೋ ಸೇನ್ ಮತ್ತು ಚಿತ್ರದಲ್ಲಿ ಮುಖ್ಯ ನಾಯಕಿಯಾಗಿ ನಟಿಸಿದ ನಟಿ ಅದಾ ಶರ್ಮಾ ಇದ್ದರು.
ಚಿತ್ರ ನಿರ್ಮಾಪಕರು ಯುಪಿ ಸಿಎಂ ಅವರನ್ನು ಔಪಚಾರಿಕವಾಗು ಭೇಟಿ ಮಾಡಿದ್ದಾರೆ ಮತ್ತು ರಾಜ್ಯ ಸರ್ಕಾರ ನೀಡಿದ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಚಲನಚಿತ್ರವನ್ನು ತೆರಿಗೆ-ಮುಕ್ತಗೊಳಿಸುವುದರಿಂದ ಟಿಕೆಟ್ ವೆಚ್ಚ ಕಡಿತವಾಗುತ್ತದೆ, ಇದು ಮಲ್ಟಿಪ್ಲೆಕ್ಸ್ಗಳಿಗೆ ಹೆಚ್ಚು ಜನರು ಭೇಟಿ ನೀಡಲು ಪ್ರೇರೇಪಿಸುತ್ತದೆ. ಚಿತ್ರವು ಬಾಕ್ಸ್ ಆಫೀಸ್ನಲ್ಲಿ 5 ದಿನಗಳಲ್ಲಿ 50 ಕೋಟಿ ರೂ ಗಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.