ಟೋಕಿಯೋ: ಸುಲಲಿತ ಉದ್ಯಮ ಮತ್ತು ಒಟ್ಟಾರೆ ವ್ಯವಹಾರವನ್ನು ಸುಲಭಗೊಳಿಸಲು ಭಾರತವು ಸಾಕಷ್ಟು ನಿರ್ಬಂಧಗಳನ್ನು ಸಡಿಲಿಸುತ್ತಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಿನ್ನೆ ಜಪಾನ್ನ ಟೋಕಿಯೊದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೂಡಿಕೆದಾರರು ಮತ್ತು ವ್ಯಾಪಾರ ಮುಖಂಡರೊಂದಿಗೆ ಸಂವಾದದಲ್ಲಿ ಸೀತಾರಾಮನ್ ಈ ವಿಷಯ ತಿಳಿಸಿದರು. ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್ ಮೂಲಕ ಭಾರತದಲ್ಲಿನ ವ್ಯವಹಾರಗಳಿಂದ ಹೂಡಿಕೆಗಳನ್ನು ಉತ್ತೇಜಿಸಲು ಮತ್ತು ಸುಗಮಗೊಳಿಸಲು ಭಾರತ ಸರ್ಕಾರದ ಪ್ರಮುಖ ಆದ್ಯತೆಯನ್ನು ಅವರು ಎತ್ತಿ ತೋರಿಸಿದರು.
ಈ ಯೋಜನೆಯನ್ನು ಆರಂಭದಲ್ಲಿ 14 ವಲಯಗಳಿಗೆ ಪರಿಚಯಿಸಲಾಯಿತು ಮತ್ತು ಈಗ ಸೆಮಿಕಂಡಕ್ಟರ್ಗಳು ಮತ್ತು ಸೌರ ಘಟಕಗಳ ಕ್ಷೇತ್ರಗಳಲ್ಲಿ ವಿಸ್ತರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಸೀತಾರಾಮನ್ ಅವರು, ಕೃತಕ ಬುದ್ಧಿಮತ್ತೆಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶದಲ್ಲಿ ಕೌಶಲ್ಯ ಹೊಂದಿರುವ ಜನರನ್ನು ಅಭಿವೃದ್ಧಿಪಡಿಸುವತ್ತ ಸರ್ಕಾರ ಗಮನಹರಿಸುತ್ತಿದೆ, ಇದರಿಂದಾಗಿ ಯುವ ಜನತೆ ಅದನ್ನು ಎಲ್ಲರಿಗೂ ನವೀನ ಪರಿಹಾರಗಳ ಕಡೆಗೆ ಬಳಸಿಕೊಳ್ಳಬಹುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.