ಗಾಂಧಿನಗರ: ಭಾರತದ ಅಭಿವೃದ್ಧಿಯು ತಮ್ಮ ಸರ್ಕಾರಕ್ಕೆ ಬದ್ಧತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ನಿರ್ಮಾಣ ನಿರಂತರ ಜವಾಬ್ದಾರಿಯಾಗಿದ್ದು, ಅದನ್ನು ಪೂರೈಸಲು ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದರು.
ಇಂದು ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ತಮ್ಮ ಸರ್ಕಾರ ಪ್ರತಿಯೊಬ್ಬ ಬಡವರನ್ನು ತಲುಪುವ ಮೂಲಕ ಅಸಮಾನತೆಯನ್ನು ಹೋಗಲಾಡಿಸುತ್ತದೆ ಎಂದರು.
ಪ್ರಧಾನಮಂತ್ರಿಯವರು PMAY (ಗ್ರಾಮೀಣ ಮತ್ತು ನಗರ) ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ನೆರವೇರಿಸಿದರು ಮತ್ತು ಯೋಜನೆಯಡಿಯಲ್ಲಿ ನಿರ್ಮಿಸಲಾದ ಸುಮಾರು 19 ಸಾವಿರ ಮನೆಗಳ ಗೃಹ ಪ್ರವೇಶದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಫಲಾನುಭವಿಗಳಿಗೆ ಕೀಲಿಕೈಗಳನ್ನು ವಿತರಿಸಿದರು. ಈ ಯೋಜನೆಗಳ ಒಟ್ಟು ವೆಚ್ಚ ಸುಮಾರು 1950 ಕೋಟಿ ರೂಪಾಯಿಗಳು. ಕಳೆದ ಒಂಬತ್ತು ವರ್ಷಗಳಲ್ಲಿ ಸುಮಾರು ನಾಲ್ಕು ಕೋಟಿ ಮನೆಗಳನ್ನು ಬಡವರಿಗೆ ನೀಡಲಾಗಿದೆ . ಈ ಪೈಕಿ ಶೇಕಡ 70ರಷ್ಟು ಮನೆಗಳು ಮಹಿಳೆಯರ ಹೆಸರಿನಲ್ಲಿದ್ದು, ತಾಯಂದಿರು ಮತ್ತು ಹೆಣ್ಣು ಮಕ್ಕಳನ್ನು ಮಾಲಿಕರನ್ನಾಗಿ ಪರಿವರ್ತಿಸುತ್ತಿವೆ ಎಂದರು.
2014ರ ನಂತರ ಸರ್ಕಾರ ಬಡವರ ಮನೆಯನ್ನು ಕಾಂಕ್ರೀಟ್ ಛಾವಣಿಗೆ ಸೀಮಿತಗೊಳಿಸದೆ ಭದ್ರ ಬುನಾದಿ ಹಾಕಿ ಮನೆ ಮಾಡಿದೆ ಎಂದು ಮೋದಿ ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಸುಮಾರು ನಾಲ್ಕು ಕೋಟಿ ಮನೆಗಳನ್ನು ಬಡವರಿಗೆ ನೀಡಲಾಗಿದೆ ಎಂದರು. ಈ ಪೈಕಿ ಶೇಕಡ 70ರಷ್ಟು ಮನೆಗಳು ಮಹಿಳೆಯರ ಹೆಸರಿನಲ್ಲಿದೆ. ಬಡವರು ತಮ್ಮ ಜೀವನದ ಮೂಲಭೂತ ಅವಶ್ಯಕತೆಗಳ ಬಗ್ಗೆ ಕಡಿಮೆ ಕಾಳಜಿ ವಹಿಸಿದಾಗ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಗರ ಯೋಜನೆಯಲ್ಲಿ ಜೀವನ ಸುಲಭ ಮತ್ತು ಜೀವನದ ಗುಣಮಟ್ಟ ಎರಡಕ್ಕೂ ಸರ್ಕಾರ ಸಮಾನ ಒತ್ತು ನೀಡುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.