ಮುಂಬಯಿ: ಮುಂಬೈ ನಗರದಲ್ಲಿ ನಿರ್ಮಿಸಲಾಗುತ್ತಿರುವ ಮಹತ್ವಾಕಾಂಕ್ಷೆಯ ಕರಾವಳಿ ರಸ್ತೆಗೆ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಪುತ್ರನ ಹೆಸರನ್ನು ಇಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಗೇಟ್ವೇ ಆಫ್ ಇಂಡಿಯಾದಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ 366 ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದರು.
ಕರಾವಳಿ ರಸ್ತೆಯು ಮುಂಬೈನ ಜೀವನಾಡಿಯಾಗಿದ್ದು, ಇದಕ್ಕೆ ಛತ್ರಪತಿ ಸಂಭಾಜಿ ಮಹಾರಾಜರ ಹೆಸರನ್ನು ಇಡಲಿದ್ದೇವೆ. ಈ ರಸ್ತೆಯಲ್ಲಿ ಸಂಭಾಜಿ ಮಹಾರಾಜರ ಪ್ರತಿಮೆಯನ್ನೂ ಸ್ಥಾಪಿಸಲಿದ್ದೇವೆ ಎಂದರು.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕರಾವಳಿ ರಸ್ತೆಯನ್ನು ನಿರ್ಮಿಸುತ್ತಿದೆ, ಇದು ದಕ್ಷಿಣ ಮುಂಬೈನ ಮರೈನ್ ಡ್ರೈವ್ ಪ್ರದೇಶವನ್ನು ಪಶ್ಚಿಮ ಉಪನಗರವಾದ ಕಾಂಡಿವಲಿಗೆ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕದ ಮೂಲಕ ಸಂಪರ್ಕಿಸುವ ಗುರಿಯನ್ನು ಹೊಂದಿದೆ.
ಈ ಮೂಲಸೌಕರ್ಯ ಅಭಿವೃದ್ಧಿಯು ಮುಂಬೈನಲ್ಲಿ ಉತ್ತರದ ದಟ್ಟಣೆಯನ್ನು ನಿವಾರಿಸುವ ನಿರೀಕ್ಷೆಯಿದೆ. ಈ ಹಿಂದೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಕುಟುಂಬ ಸದಸ್ಯರು ಕರಾವಳಿ ರಸ್ತೆಗೆ ಅವರ ಹೆಸರನ್ನು ಇಡಬೇಕೆಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೀಗ ಸಂಭಾಜಿ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ.
मुंबईची लाईफलाईन ठरणाऱ्या सागरी महामार्ग (कोस्टल हायवे) ला छत्रपती संभाजी महाराज यांचे नाव देण्यात येईल, अशी घोषणा मुख्यमंत्री एकनाथ शिंदे यांनी आज केली. याच कोस्टल हायवे परिसरात छत्रपती संभाजी महाराज यांचा दिमाखदार पुतळा उभारण्यात येईल.
गेटवे ऑफ इंडिया येथे पहिल्यांदाच आयोजित… pic.twitter.com/eLRcQkzBqk— CMO Maharashtra (@CMOMaharashtra) May 14, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.