ನವದೆಹಲಿ: ಕೇಂದ್ರ ಸಂಪರ್ಕ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಚಾರ್ ಸಾಥಿ ಪೋರ್ಟಲ್ ಎಂಬ ಸಿಟಿಜನ್ ಸೆಂಟ್ರಿಕ್ ಪೋರ್ಟಲ್ ಅನ್ನು ಪ್ರಾರಂಭಿಸಿದರು.
ದೂರಸಂಪರ್ಕ ಇಲಾಖೆಯ ಉಪಕ್ರಮವಾಗಿರುವ ಸಂಚಾರ್ ಸಾಥಿ ಪೋರ್ಟಲ್ ನಾಗರಿಕರಿಗೆ ತಮ್ಮ ಹೆಸರಿನಲ್ಲಿ ನೀಡಲಾದ ಮೊಬೈಲ್ ಸಂಪರ್ಕಗಳನ್ನು ತಿಳಿದುಕೊಳ್ಳಲು, ಅವರಿಗೆ ಅಗತ್ಯವಿಲ್ಲದ ಸಂಪರ್ಕಗಳನ್ನು ಕಡಿತಗೊಳಿಸಲು ಮತ್ತು ಕಳೆದುಹೋದ ಮೊಬೈಲ್ ಫೋನ್ಗಳನ್ನು ನಿರ್ಬಂಧಿಸಲು ಮತ್ತು ಪತ್ತೆಹಚ್ಚಲು ಅನುವು ಮಾಡಿಕೊಡುವ ಮೂಲಕ ಅವರನ್ನು ಸಶಕ್ತಗೊಳಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಮೊಬೈಲ್ ಬಳಕೆದಾರರನ್ನು ಮೋಸದ ಚಟುವಟಿಕೆಗಳಿಂದ ರಕ್ಷಿಸಲು ಈ ಪೋರ್ಟಲ್ನಲ್ಲಿ ಮೂರು ಪ್ರಮುಖ ಮಾಡ್ಯೂಲ್ಗಳನ್ನು ಸೇರಿಸಲಾಗಿದೆ. ಟೆಲಿಕಾಂ ಕ್ಷೇತ್ರದಲ್ಲಿ ಸರಣಿ ಸುಧಾರಣೆಗಳು ನಡೆದಿವೆ, ಇದರಿಂದಾಗಿ ಟೆಲಿಕಾಂ ಉದ್ಯಮವು ದೃಢವಾದ ಮತ್ತು ಹೂಡಿಕೆ ಆಧಾರಿತ ಉದ್ಯಮವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಕೆ ರಾಜಾರಾಮನ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.