ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿಯೇತರ ಪಕ್ಷಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನದಲ್ಲಿ ಪ್ರತಿಪಕ್ಷ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಬಿಜೆಪಿ, ಪ್ರಧಾನಿಯಾಗುವ ಬಗ್ಗೆ ಹಗಲುಗನಸು ಕಾಣುವ ಬದಲು ಅರಾಜಕತೆಯತ್ತ ವಾಲುತ್ತಿರುವ ತಮ್ಮ ರಾಜ್ಯದತ್ತ ಅವರು ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗಿನ ಭೇಟಿಯ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಜೆಪಿ ಭಾನುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ನಿತೀಶ್ ಕುಮಾರ್ ಅವರು ಬಿಜೆಪಿಯೇತರ ಪಕ್ಷಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನದಲ್ಲಿ ಪ್ರತಿಪಕ್ಷ ನಾಯಕರನ್ನು ಭೇಟಿಯಾಗುತ್ತಿದ್ದಾರೆ ಮತ್ತು ವರ್ಗಾವಣೆ ಮತ್ತು ಪೋಸ್ಟಿಂಗ್ಗಳ ಅಧಿಕಾರದ ವಿಷಯದ ಕುರಿತು ಕೇಂದ್ರವು ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲಾ, “ಇತರ ನಾಯಕರನ್ನು ಭೇಟಿ ಮಾಡುವುದು ನಿತೀಶ್ ಕುಮಾರ್ ಅವರ ಹಕ್ಕು ಆದರೆ ಅವರು ತಮ್ಮ ರಾಜ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಅವರು ಪ್ರಧಾನಿಯಾಗಲು ಹಗಲುಗನಸು ಕಾಣುತ್ತಿದ್ದಾರೆ, ಇದರ ಬದಲಿಗೆ ಅವರು ಬಿಹಾರ ಮುಖ್ಯಮಂತ್ರಿಯಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು, ಅದು ಅವರ ಸಾಂವಿಧಾನಿಕ ಜವಾಬ್ದಾರಿ” ಎಂದಿದ್ದಾರೆ.
ಬಿಹಾರದ ಬಿಜೆಪಿ ಎಂಎಲ್ಸಿ ಸಂಜಯ್ ಮಯೂಖ್ ಮಾತನಾಡಿ, ನಿತೀಶ್ ಕುಮಾರ್ ಅವರು ತಮ್ಮ ಕನಸಿನ ಪ್ರಪಂಚದಿಂದ ಹೊರಬರಬೇಕು, ಏಕೆಂದರೆ ಪ್ರಧಾನಿ ಹುದ್ದೆ ಖಾಲಿ ಇಲ್ಲ. ಅಪರಾಧ ಮತ್ತು ಭ್ರಷ್ಟಾಚಾರದತ್ತ ರಾಜ್ಯವನ್ನು ತಳ್ಳಿದ್ದಕ್ಕಾಗಿ ರಾಜ್ಯದ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.