ಮುಂಬಯಿ: ಮಹಾರಾಷ್ಟ್ರದಲ್ಲಿ ಮಾಂಸ ಮಾರಾಟ ನಿಷೇಧದ ಕುರಿತು ಹಿರಿಯ ಸಂಪಾದಕ ರಾಜ್ದೀಪ್ ಸರ್ದೇಸಾಯಿ ಅವರು ಬರೆದಿರುವ ಬಹಿರಂಗ ಪತ್ರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಸಿದ್ದಾರೆ.
ರಾಜ್ಯ ಸರ್ಕಾರ ಮಾಂಸ ನಿಷೇಧದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ಸರ್ಕಾರದಿಂದ ಹೊಸ ಆದೇಶ ಯಾವುದೇ ಸ್ಥಳೀಯ ಸಂಸ್ಥೆಗಳಿಗೆ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಈ ಹಿಂದೆ 2004ರಲ್ಲಿ ಪರ್ಯುಶನ ಪರ್ವ ಸಂದರ್ಭ 2 ದಿನಗಳ ಕಾಲ ಮಾಂಸ ನಿಷೇಧದ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಎಲ್ಲಾ ಪುರಸಭಾ ಸಂಸ್ಥೆಗಳಿಗೆ ತಲುಪಿಸಲಾಗಿತ್ತು. ಅಂದಿನಿಂದ ಮೀರಾ ಭೈಂದರ್ ಸೇರಿದಂತೆ ಎಲ್ಲಾ ಪುರಸಭಾ ಸಂಸ್ಥೆಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗಿತ್ತು. ಈವರೆಗೆ ಇದನ್ನು ಯಾರೂ ವಿರೋಧಿಸಿರಲಿಲ್ಲ ಎಂದು ಹೇಳಿದರು.
ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳುಗಳಲ್ಲಿ ಗಣೇಶ ಚತುರ್ಥಿ, ಈದ್, ನವರಾತ್ರಿ ಸೇರಿದಂತೆ ಹಲವು ಹಬ್ಬಗಳು ನಡೆಯಲಿದ್ದು, ಈ ಸಂದರ್ಭ ನಿರ್ವಹಣೆಗೆ ಪೊಲೀಸ್ ಅಧಿಕಾರಿ ಅಗತ್ಯವಿದ್ದು, ರಾಕೇಶ್ ಮಾರಿಯಾ ಅವರನ್ನು ಪೊಲೀಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಶೀನಾ ಬೋರಾ ಸಾವು ಪ್ರಕರಣ ಹಾಗೂ ಮಾರಿಯಾ ಅವರ ನೇಮಕಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಮಳೆಯ ಕೊರತೆಯಿಂದಾಗಿ ಜಲಯುಕ್ತ ಶಿವರ ಯೋಜನೆಯನ್ನು ಜಾರಿಗೆ ತರಲಾಗಿದ್ದು, ರಾಜ್ಯವನ್ನು ಬರ ಮುಕ್ತ ಮಾಡುವುದು ಇದರ ಉದ್ದೇಶವಾಗಿದೆ. ರಾಜ್ಯ ಜನತೆಯ 300 ಕೋಟಿ ಕೊಡುಗೆಯಿಂದಾಗಿ ಕಳೆದ 6 ತಿಂಗಳಿನಲ್ಲಿ 6000 ಹಳ್ಳಿಗಳಲ್ಲಿ 10,000 ಉದ್ಯೋಗ ಲಭಿಸಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.