ನವದೆಹಲಿ: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ದೇಶದಲ್ಲಿ ಐತಿಹಾಸಿಕ ಘಟನೆ ನಡೆದಾಗ ರಾಹುಲ್ ಗಾಂಧಿ ಎದೆ ಬಡಿದುಕೊಂಡು ಅರಚಲು ಆರಂಭಿಸುತ್ತಾರೆ ಎಂದಿದೆ.
“ಯಾಕೆ ಹೀಗಾಗುತ್ತದೆ? ದೇಶವು ಪ್ರಗತಿಯಲ್ಲಿರುವಾಗ ಶುಭ ಮುಹೂರ್ತದಲ್ಲಿ ಅವರು ಕೆಟ್ಟ ಶಕುನವಾಗಿ ಮುಂದೆ ಬರುತ್ತಾರೆ. ಹೊಸ ಸಂಸತ್ತಿನ ಕಟ್ಟಡವು ಪ್ರಜಾಪ್ರಭುತ್ವದ ಮಂದಿರವಾಗುವ ಇಂತಹ ಐತಿಹಾಸಿಕ ಕ್ಷಣವನ್ನು ಸ್ವಾಗತಿಸಲು ಸಾಧ್ಯವಿಲ್ಲದಂತಹ ಸಣ್ಣ ಮನಸ್ಥಿತಿಯನ್ನು ಅವರು ಹೊಂದಿದ್ದಾರೆಯೇ” ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರಶ್ನಿಸಿದ್ದಾರೆ.
ದೇಶದಲ್ಲಿ ಐತಿಹಾಸಿಕ ಕ್ಷಣ ಬಂದಾಗಲೆಲ್ಲಾ ಗಾಂಧಿ ತನ್ನ ಎದೆಯನ್ನು ಬಡಿದುಕೊಳ್ಳು ಪ್ರಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.
ಪ್ರಧಾನಿಯ ಬದಲು ನೂತನ ಸಂಸತ್ತಿನ ಕಟ್ಟಡವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಕಾಂಗ್ರೆಸ್ ಹೇಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಕಾಣುತ್ತಿದ್ದ ಕನಸನ್ನು ಪ್ರಧಾನಿ ಈಡೇರಿಸಿದರೂ ಅವರಿಗೆ ಸಮಸ್ಯೆಯಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.