ನವದೆಹಲಿ: ಮೂರು ರಾಷ್ಟ್ರಗಳ ಭೇಟಿಯನ್ನು ಮುಕ್ತಾಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂದು ಜಗತ್ತು ಭಾರತ ಏನು ಯೋಚಿಸುತ್ತಿದೆ ಎಂಬುದನ್ನು ತಿಳಿಯಲು ಬಯಸುತ್ತಿದೆ ಎಂದು ಹೇಳಿದರು.
ತಮ್ಮನ್ನು ಸ್ವಾಗತಿಸಲು ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಲ್ಲಿನ ಜನರು ಜಗತ್ತಿಗೆ ಲಸಿಕೆಗಳನ್ನು ಯಾಕೆ ನೀಡಿದ್ದೀರಿ ಎಂದು ನನ್ನನ್ನು ಕೇಳಿದರು, ಇದು ಬುದ್ಧ, ಗಾಂಧಿಯ ನಾಡು ಎಂದು ನಾನು ಹೇಳಲು ಬಯಸುತ್ತೇನೆ, ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಇಂದು ಜಗತ್ತು ಭಾರತ ಏನು ಆಲೋಚಿಸುತ್ತಿದೆ ಎಂದು ತಿಳಿಯಲು ಬಯಸುತ್ತದೆ. ನಾನು ನನ್ನ ದೇಶದ ಸಂಸ್ಕೃತಿಯ ಬಗ್ಗೆ ಮಾತನಾಡುವಾಗ, ನಾನು ಪ್ರಪಂಚದ ಕಣ್ಣುಗಳನ್ನು ನೋಡುತ್ತೇನೆ. ಈ ವಿಶ್ವಾಸ ಬಂದಿದ್ದು ನೀವು ದೇಶದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಿದ್ದರಿಂದ. ಇಲ್ಲಿಗೆ ಬಂದು ನೆರೆದಿರುವ ಜನರು ಭಾರತವನ್ನು ಪ್ರೀತಿಸುವವರೇ ಹೊರತು ಪ್ರಧಾನಿ ಮೋದಿಯನ್ನಲ್ಲ” ಎಂದು ಹೇಳಿದರು.
ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಟೋಕ್ ಪಿಸಿನ್ ಅನುವಾದವನ್ನು ಬಿಡುಗಡೆ ಮಾಡುವ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ತಮಿಳು ಭಾಷೆ ನಮ್ಮ ಭಾಷೆ. ಇದು ಪ್ರತಿಯೊಬ್ಬ ಭಾರತೀಯನ ಭಾಷೆ. ಇದು ವಿಶ್ವದ ಅತ್ಯಂತ ಹಳೆಯ ಭಾಷೆ. ನನಗೆ ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಟೋಕ್ ಪಿಸಿನ್ ಅನುವಾದವನ್ನು ಬಿಡುಗಡೆ ಮಾಡುವ ಅವಕಾಶ ಸಿಕ್ಕಿತು” ಎಂದಿದ್ದಾರೆ.
ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಮೂರು ರಾಷ್ಟ್ರಗಳ ಭೇಟಿಯನ್ನು ಮುಗಿಸಿದ ನಂತರ ಬೆಳಿಗ್ಗೆ ಪ್ರಧಾನಿ ಮೋದಿ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಸದಸ್ಯರು ಹಾರ ಹಾಕಿ ಸ್ವಾಗತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.