ಚೆನ್ನೈ: ಗುಜರಾತಿನ ಖ್ಯಾತ ಹಾಲಿನ ಬ್ರ್ಯಾಂಡ್ ಅಮುಲ್ ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿದ ಬಳಿಕ ಇದೀಗ ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದೆ. ಕರ್ನಾಟಕದಲ್ಲಿ ಅಮುಲ್ Vs ನಂದಿನಿ ವಿವಾದ ತಣ್ಣಗಾಗುತ್ತಿದ್ದಂತೆ ತಮಿಳುನಾಡಿನಲ್ಲಿ ಅಮುಲ್ Vs ಆವಿನ್ ವಿವಾದ ಆರಂಭಗೊಂಡಿದೆ. ಅಮುಲ್ ತಮಿಳುನಾಡು ಪ್ರವೇಶಿಸುವುದರಿಂದ ಅನಾರೋಗ್ಯಕರ ಸ್ಪರ್ಧೆ ಏರ್ಪಡುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆರೋಪಿಸಿದ್ದಾರೆ.
ರಾಜ್ಯದ ಸಹಕಾರಿ ಸಂಘದ ಹಾಲಿನ ಶೆಡ್ನಿಂದ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಬೇಕು, ಇದು ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಂಗ್ರಹಿಸುವ ಮತ್ತು ಮಾರಾಟ ಮಾಡುವ ವ್ಯವಹಾರಗಳ ನಡುವೆ ಈ ವಿಷಯದಲ್ಲಿ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಮಧ್ಯಪ್ರವೇಶ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಆಗ್ರಹಿಸಿದ್ದಾರೆ.
ಸ್ಟಾಲಿನ್ ಗೃಹ ಸಚಿವರಿಗೆ ಬರೆದ ಪತ್ರದಲ್ಲಿ,“ಇತ್ತೀಚೆಗೆ ಅಮುಲ್ ತಮ್ಮ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಬಳಸಿಕೊಂಡು ಶೀತಲೀಕರಣ ಕೇಂದ್ರಗಳು ಮತ್ತು ಸಂಸ್ಕರಣಾ ಘಟಕವನ್ನು ಸ್ಥಾಪಿಸಿರುವುದು ಗಮನಕ್ಕೆ ಬಂದಿದೆ. ನಮ್ಮ ರಾಜ್ಯದ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ, ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್ಪಿಒಗಳು, ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಯೋಜಿಸಿದೆ. ಇದು ‘ಆಪರೇಷನ್ ವೈಟ್ ಫ್ಲಡ್’ ಮನೋಭಾವಕ್ಕೆ ವಿರುದ್ಧವಾಗಿದೆ ಮತ್ತು ನಮ್ಮ ದೇಶದಲ್ಲಿ ಹಾಲಿನ ಕೊರತೆ ಇರುವುದರಿಂದ ಗ್ರಾಹಕರಿಗೆ ಸಮಸ್ಯೆಗಳನ್ನು ಉಂಟುಮಾಡುತ್ತದೆ” ಎಂದಿದ್ದಾರೆ.
The decision of AMUL to operate in Tamil Nadu is unfortunate, detrimental to the interest of Aavin and will create unhealthy competition between the cooperatives.
Regional cooperatives have been the bedrock of dairy development in the states and are better placed to engage and… pic.twitter.com/yn2pKINofO
— M.K.Stalin (@mkstalin) May 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.