ನವದೆಹಲಿ: ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ವಿಷಯ ಪ್ರಸ್ತುತ ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 19 ವಿರೋಧ ಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿದ್ದು, ಇದರಲ್ಲಿ ಸಮಾಜವಾದಿ ಕೂಡ ಸೇರಿದೆ.
ಆದರೆ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಪ್ರತಿಪಕ್ಷಗಳ ನಿಲುವನ್ನು ಪ್ರಶ್ನಿಸಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಿಜವಾದ ಅಧಿಕಾರ ದೇಶದ ಪ್ರಧಾನಿಗೆ ಮಾತ್ರ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರತಿಪಕ್ಷಗಳ ಬಹಿಷ್ಕಾರದ ನಿಲುವಿನ ನಡುವೆ, ಎಸ್ಪಿ ನಾಯಕರ ಹೇಳಿಕೆಯು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಬಿದ್ದ ಮತ್ತೊಂದು ಹೊಡೆತವೆಂದೇ ಪರಿಗಣಿಸಲಾಗಿದೆ.
ರಾಜ್ಯಸಭಾ ಸಂಸದ ರಾಮ್ ಗೋಪಾಲ್ ಯಾದವ್ ಅವರ ಹೇಳಿಕೆಯು ಅವರ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ಗೆ ಮುಜುಗರ ತಂದಿದೆ. ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರಿಂದ ಸಂಸತ್ತಿನ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೀಗ ಅವರದ್ದೇ ಪಕ್ಷದ ನಾಯಕ ಪ್ರಧಾನಿ ಉದ್ಘಾಟನೆಯ ಪರ ನಿಲುವು ತಾಳಿರುವುದು ಮಹತ್ವ ಪಡೆದುಕೊಂಡಿದೆ.
ಮೇ.28ರಂದು ನೂತನ ಸಂಸತ್ ಭವನ ಉದ್ಘಾಟನೆಯಾಗಲಿದ್ದು, ಇದನ್ನು 19 ಪಕ್ಷಗಳು ಬಹಿಷ್ಕರಿಸಿವೆ. ಪ್ರತಿಪಕ್ಷಗಳ ಧೋರಣೆಯನ್ನು ಅನೇಕರು ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.