ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3ನೇ ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯು ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸುದ್ದಿ ಮಾಡಿತು. ಮೂರು ದಿನಗಳ ಜಿ20 ಸಭೆ ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪಾಕ್ನ ಹಳಿತಪ್ಪಿಸುವ ಪ್ರಯತ್ನಗಳು ಮತ್ತು ಭಯೋತ್ಪಾದಕ ಸಂಘಟನೆಗಳ ಬೆದರಿಕೆಗಳ ಹೊರತಾಗಿಯೂ ಭಾರತವು ಶ್ರೀನಗರದಲ್ಲಿ ಜಿ 20 ಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ ನಂತರ ಪಾಕಿಸ್ಥಾನವು ಈಗ ಗೋಳಾಡಲು ಆರಂಭಿಸಿದೆ.
ಸಭೆಯ ಯಶಸ್ವಿ ಆಯೋಜನೆ ಪಾಕಿಸ್ಥಾನಕ್ಕೆ ದೊಡ್ಡ ಮಟ್ಟದಲ್ಲಿ ಹೊಡೆತ ನೀಡಿದೆ. ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರರು, ಶ್ರೀನಗರದಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜಮ್ಮು ಮತ್ತು ಕಾಶ್ಮೀರವು ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ವಿವಾದಿತ ಪ್ರದೇಶವಾಗಿದೆ. ವಿವಾದವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಕಾರ್ಯಸೂಚಿಯಲ್ಲಿ ಏಳು ದಶಕಗಳಿಂದ ಉಳಿದಿದೆ. ಆದರೂ ಭಾರತವು IIOJK ನಲ್ಲಿ ಈ ಸಭೆಯನ್ನು ಆಯೋಜಿಸಿದೆ. ಸಂಬಂಧಿತ ಯುಎನ್ ಸೆಕ್ಯುರಿಟಿ ಕೌನ್ಸಿಲ್ ನಿರ್ಣಯಗಳು, ಯುಎನ್ ಚಾರ್ಟರ್ ಮತ್ತು ಅಂತರರಾಷ್ಟ್ರೀಯ ಕಾನೂನಿನ ತತ್ವಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ” ಎಂದಿದ್ದಾರೆ.
ಆದರೆ ಪಾಕಿಸ್ಥಾನಕ್ಕೆ ತಿರುಗೇಟು ನೀಡಿರುವ ಭಾರತವು ತನ್ನ ಆಂತರಿಕ ವಿಷಯಗಳಲ್ಲಿ ನೆರೆಯ ದೇಶಕ್ಕೆ ಯಾವುದೇ ಸ್ಥಾನವಿಲ್ಲ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.