ಇಂಫಾಲ: ಮಣಿಪುರದಲ್ಲಿ ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಸುಮಾರು 40 ಶಂಕಿತ ಕುಕಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಸುಗ್ನು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಎನ್ಕೌಂಟರ್ಗಳಲ್ಲಿ 7 ನಾಗರಿಕರು ಮತ್ತು 2 ಪೊಲೀಸ್ ಸಿಬ್ಬಂದಿ ಕೂಡ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಸುಮಾರು 250 ಮನೆಗಳಿಗೆ ಉಗ್ರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹಿಂಸಾಚಾರವನ್ನು ಖಂಡಿಸಿದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, ಕುಕಿ ಉಗ್ರಗಾಮಿಗಳನ್ನು ಭಯೋತ್ಪಾದಕರು ಎಂದು ಕರೆದರು. ಇಂದು ಮಧ್ಯಾಹ್ನ ಇಂಫಾಲ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೇನೆ ಮತ್ತು ಅರೆಸೇನಾ ಸಿಬ್ಬಂದಿ ಸೇರಿದಂತೆ ಸಂಯೋಜಿತ ಪಡೆಗಳು ಕುಕಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ವರದಿಗಳ ಪ್ರಕಾರ, ಉರಿಪೋಕ್ ವಿಧಾನಸಭಾ ಕ್ಷೇತ್ರದ ಶಾಸಕರ ನಿವಾಸಕ್ಕೆ ನುಗ್ಗಿದ್ದ ಜನರ ಗುಂಪಿನ ಮೇಲೆ ಅವರ ಮಗ ಗುಂಡು ಹಾರಿಸಿದ ನಂತರ ಮನೆಯನ್ನು ಸುಟ್ಟು ಹಾಕಲಾಗಿದೆ. ಘಟನೆಯಲ್ಲಿ ಇಬ್ಬರು ನಾಗರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೋಪಗೊಂಡ ಗುಂಪು ಇತರ ಇಬ್ಬರು ಶಾಸಕರ ನಿವಾಸವನ್ನು ಧ್ವಂಸಗೊಳಿಸಿದೆ.
ಇಂದಿನಿಂದ ಐದು ಕಣಿವೆಗಳಲ್ಲಿ ಅನಿರ್ದಿಷ್ಟ ಕರ್ಫ್ಯೂ ಹೇರಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.