ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಅಬುಜಾದ ಈಗಲ್ ಸ್ಕ್ವೇರ್ನಲ್ಲಿ ನೈಜೀರಿಯಾದ ಚುನಾಯಿತ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅವರು ನೈಜೀರಿಯಾಕ್ಕೆ ಮೂರು ದಿನಗಳ ಭೇಟಿಯಲ್ಲಿದ್ದಾರೆ. ಅವರ ಭೇಟಿಯು ಭಾರತ-ನೈಜೀರಿಯಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ವಿಶ್ಲೇಷಿಸಲಾಗಿದೆ. ನೈಜೀರಿಯಾಕ್ಕೆ ಭಾರತೀಯ ರಕ್ಷಣಾ ಸಚಿವರ ಮೊದಲ ಭೇಟಿ ಇದಾಗಿದೆ.
ಈ ಭೇಟಿಯು ಉಭಯ ದೇಶಗಳ ನಡುವೆ ಬಲವಾದ ಸ್ನೇಹ ಸಂಬಂಧವನ್ನು ನಿರ್ಮಿಸುವಲ್ಲಿ ಪ್ರಮುಖ ಹೆಗ್ಗುರುತಾಗಿದೆ.
ಭಾರತ ಮತ್ತು ನೈಜೀರಿಯಾ ನಡುವೆ ಹೆಚ್ಚುತ್ತಿರುವ ರಕ್ಷಣಾ ಸಹಕಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ಪ್ರಮುಖ ರಕ್ಷಣಾ ಪಿಎಸ್ಯುಗಳ ಉನ್ನತ ನಾಯಕತ್ವವು ರಾಜನಾಥ್ ಸಿಂಗ್ ಅವರ ಜೊತೆ ನೈಜೀರಿಯಾ ತೆರಳಿದೆ.
ರಕ್ಷಣಾ ಉಪಕರಣಗಳು ಮತ್ತು ವೇದಿಕೆಗಳನ್ನು ಗುರುತಿಸಲು ನೈಜೀರಿಯನ್ ಉದ್ಯಮ ಮತ್ತು ಸಶಸ್ತ್ರ ಪಡೆಗಳ ಪ್ರತಿನಿಧಿಗಳೊಂದಿಗೆ ಅವರು ಸಭೆಗಳನ್ನು ನಡೆಸುತ್ತಾರೆ, ಅದರ ಮೂಲಕ ಭಾರತೀಯ ರಕ್ಷಣಾ ಉದ್ಯಮವು ಆ ದೇಶದ ಅವಶ್ಯಕತೆಗಳನ್ನು ಬೆಂಬಲಿಸುತ್ತದೆ ಎಂಬ ಬಲವಾದ ಸಂದೇಶ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.