ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದು, ಅಲ್ಲಿ ಅವರು ಇಂದು ಸರ್ವ ರಾಜಕೀಯ ಪಕ್ಷಗಳ ಸಭೆಯನ್ನು ನಡೆಸುವ ನಿರೀಕ್ಷೆಯಿದೆ. ಅಲ್ಲದೇ ಸದ್ಯದ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಪುನಃಸ್ಥಾಪಿಸಲು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸುತ್ತಾರೆ ಎಂದು ಮೂಲಗಳು ತಿಳಿಸಿವೆ.
ಮಣಿಪುರಕ್ಕೆ ಮೂರು ದಿನಗಳ ಭೇಟಿಗಾಗಿ ಶಾ ನಿನ್ನೆ ರಾತ್ರಿ ಇಂಫಾಲ್ ತಲುಪಿದರು. ಆಗಮನದ ನಂತರ ಶಾ ಅವರು ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸಿದರು, ಇದರಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಯೋಜನೆಗಳನ್ನು ಚರ್ಚಿಸಲಾಯಿತು.
ನಿನ್ನೆ ಮಣಿಪುರದಲ್ಲಿ ಮೂವರು ನಾಗರಿಕರು ಗುಂಡಿನ ದಾಳಿಗೆ ಬಲಿಯಾಗಿದ್ದರು. ರಾಜ್ಯದಲ್ಲಿ ನಡೆದ ವಿವಿಧ ಘಟನೆಗಳಲ್ಲಿ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್ಬಿ) ನ ಒಬ್ಬ ಯೋಧ ಸೇರಿದಂತೆ ಆರು ಮಂದಿಗೆ ಗುಂಡೇಟಿನ ಗಾಯಗಳಾಗಿವೆ.
ಕಕ್ಚಿಂಗ್ ಜಿಲ್ಲೆಯ ಸುಗಾನು ಗ್ರಾಮದ ನಾಗರಿಕರ ಮೇಲೆ ಶಂಕಿತ ಕುಕಿ ಭಯೋತ್ಪಾದಕರು ದಾಳಿ ನಡೆಸಿದ್ದು, ಮೂವರು ನಾಗರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಂಕಿತ ಕುಕಿ ಭಯೋತ್ಪಾದಕರು ನಿನ್ನೆ ಮಧ್ಯಾಹ್ನ ಇಂಫಾಲ್ ಪಶ್ಚಿಮ ಜಿಲ್ಲೆಯ ಕಾಂಟೋ ಸಬಲ್ ಮೀಟೆಯ್ ಗ್ರಾಮದಲ್ಲಿ ಐದು ಮನೆಗಳು ಮತ್ತು ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿರಾಶ್ರಿತ ಗ್ರಾಮಸ್ಥರು ಸಮೀಪದ ಗ್ರಾಮಗಳಿಗೆ ತೆರಳಿ ಆಶ್ರಯ ಪಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.