ನವದೆಹಲಿ: ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಕಾಂಬೋಡಿಯಾದ ರಾಜ ನೊರೊಡೊಮ್ ಸಿಹಾಮೊನಿ ಅವರಿಗೆ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಇತರ ಗಣ್ಯರನ್ನು ರಾಜನಿಗೆ ಪರಿಚಯಿಸಿದರು.
ನೊರೊಡೊಮ್ ಸಿಹಾಮೋನಿ ಅವರು ಇಂದು ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಅವರನ್ನೂ ಭೇಟಿ ಮಾಡಲಿದ್ದಾರೆ.
ಭಾರತಕ್ಕೆ ಮೂರು ದಿನಗಳ ಭೇಟಿಗಾಗಿ ಕಾಂಬೋಡಿಯಾದ ರಾಜ ನಿನ್ನೆ ನವದೆಹಲಿಗೆ ಆಗಮಿಸಿದರು. ಅವರನ್ನು ವಿದೇಶಾಂಗ ಖಾತೆ ರಾಜ್ಯ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಬರಮಾಡಿಕೊಂಡರು.
ಈ ಭೇಟಿಯು 1952 ರಲ್ಲಿ ಸ್ಥಾಪನೆಯಾದ ಭಾರತ ಮತ್ತು ಕಾಂಬೋಡಿಯಾ ನಡುವಿನ ರಾಜತಾಂತ್ರಿಕ ಸಂಬಂಧಗಳ 70 ನೇ ವಾರ್ಷಿಕೋತ್ಸವದ ಆಚರಣೆಯನ್ನು ಸೂಚಿಸುತ್ತದೆ. ಸುಮಾರು ಆರು ದಶಕಗಳ ನಂತರ ಈ ಭೇಟಿ ನಡೆಯುತ್ತಿದೆ, 1963 ರಲ್ಲಿ ಪ್ರಸ್ತುತ ರಾಜನ ತಂದೆ ಕೊನೆಯ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.