ಬೆಂಗಳೂರು: ಮಹಿಳೆಯರಿಗೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ನೀಡುವ ಬಗ್ಗೆ ಮತ್ತು ಅದಕ್ಕೆ ತಗಲುವ ವೆಚ್ಚದ ಬಗ್ಗೆ ವರದಿ ಸಿದ್ದವಾಗಿದೆ. ವರದಿಯನ್ನು ಬುದ್ಧವಾರ ಮಧ್ಯಾಹ್ನ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಹೇಳಿದ್ದೇವೆ. ಬಸ್ ಪಾಸ್ ನೀಡಲು ಫಲಾನುಭವಿಗಳನ್ನು ಗುರುತಿಸುವುದು ಮುಖ್ಯ. ಎಲ್ಲರಿಗೂ ಉಚಿತ ಪಾಸ್ ನೀಡುವುದು ಸವಾಲಿನ ಕೆಲಸ. ಕರ್ನಾಟಕದಲ್ಲಿ 3.5 ಕೋಟಿ ಮಹಿಳೆಯರಿದ್ದಾರೆ. ಎಲ್ಲರೂ ಬಸ್ಗಳಲ್ಲಿ ಸಂಚರಿಸುವುದಿಲ್ಲ, ಹೀಗಾಗಿ ಫಲಾನುಭವಿಗಳನ್ನು ಗುರುತಿಸಿ ಪಾಸ್ ವಿತರಿಸುತ್ತೇವೆ ಎಂದಿದ್ದಾರೆ.
ಉಚಿತ ಪ್ರಯಾಣದ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಅಧಿಕಾರಿಗಳು ವಿಶ್ಲೇಷಿಸಿ ವರದಿ ತಯಾರಿಸಿದ್ದಾರೆ. ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ, ವಾಯುವ್ಯ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ನಿಗಮಗಳಿಂದ ಮಾಹಿತಿಯನ್ನು ಈಗಾಗಲೇ ಪಡೆಯಲಾಗಿದೆ. ಎಷ್ಟು ಮಹಿಳೆಯರು ಬಸ್ಗಳಲ್ಲಿ ಓಡಾಡುತ್ತಾರೆ ಎಂಬುದರ ಬಗ್ಗೆಯೂ ಸಂಪೂರ್ಣ ಮಾಹಿತಿಯು ವರದಿಯಲ್ಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.