ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಗಳವಾರ ಒಂಬತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಇಂದು ರಾಜಸ್ಥಾನದಿಂದ ಬಿಜೆಪಿಯ ಸಾಮೂಹಿಕ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದು,
ಇಂದು ರಾಜಸ್ಥಾನದ ಅಜ್ಮೀರ್ನಲ್ಲಿ ಮೆಗಾ ರ್ಯಾಲಿಯೊಂದಿಗೆ ಬಿಜೆಪಿಯ ಒಂದು ತಿಂಗಳ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ.
ಅಜ್ಮೀರ್ಗೆ ತೆರಳುವ ಮುನ್ನ ಪ್ರಧಾನಿ ಪುಷ್ಕರ್ನ ಬ್ರಹ್ಮ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ನಾಯಕತ್ವ ಜಗಳದಲ್ಲಿ ರಾಜಸ್ಥಾನ ರಾಜ್ಯವು ಸಿಲುಕಿರುವ ಸಮಯದಲ್ಲೇ ಬಿಜೆಪಿ ತನ್ನ ಮಹತ್ವದ ಪ್ರಚಾರವನ್ನು ಪ್ರಾರಂಭಿಸಲು ರಾಜಸ್ಥಾನವನ್ನು ಆಯ್ಕೆ ಮಾಡಿದೆ.
ಮುಂದಿನ 30 ದಿನಗಳಲ್ಲಿ ಬಿಜೆಪಿಯ ಹಿರಿಯ ನಾಯಕರು ದೇಶಾದ್ಯಂತ 51 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಮಟ್ಟದಲ್ಲಿ ಒಟ್ಟು 500 ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ಪಕ್ಷ ತಿಳಿಸಿದೆ.
“ಪಕ್ಷದ ಸದಸ್ಯರು ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 1,000 ಅಂದರೆ ದೇಶಾದ್ಯಂತ ಐದು ಲಕ್ಷ ಕುಟುಂಬಗಳೊಂದಿಗೆ ಸಂಪರ್ಕ ಸಾಧಿಸುತ್ತಾರೆ. ಪಕ್ಷವು 543 ಲೋಕಸಭಾ ಸ್ಥಾನಗಳನ್ನು 144 ಕ್ಲಸ್ಟರ್ಗಳಾಗಿ ವಿಂಗಡಿಸಿದೆ, ಪ್ರತಿಯೊಂದೂ ಮೂರರಿಂದ ನಾಲ್ಕು ಕ್ಷೇತ್ರಗಳನ್ನು ಹೊಂದಿದೆ” ಎಂದು ಪ್ರಚಾರದ ಉಸ್ತುವಾರಿ ತರುಣ್ ಚುಗ್ ಹೇಳಿದ್ದಾರೆ.
ಸಚಿವರು ಸೇರಿದಂತೆ ಪಕ್ಷದ ಇಬ್ಬರು ಹಿರಿಯ ನಾಯಕರು ಪ್ರತಿ ಕ್ಲಸ್ಟರ್ನಲ್ಲಿ ಎಂಟು ದಿನಗಳನ್ನು ಕಳೆಯುತ್ತಾರೆ ಮತ್ತು ಸಮಾಜದ ವಿವಿಧ ವರ್ಗಗಳೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ಆಡಳಿತ ಮತ್ತು ಬಡವರ ಕಲ್ಯಾಣದ ಕುರಿತು ಸರ್ಕಾರದ ವರದಿ ಕಾರ್ಡ್ ಅನ್ನು ಸಹ ಪ್ರಸ್ತುತಪಡಿಸುತ್ತಾರೆ ಎಂದು ಎಂದು ಚುಗ್ ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಮೇ 26, 2014 ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೇ 30, 2019 ರಂದು ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.