ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಡಳಿತದ ಕಟು ಟೀಕಾಕಾರರಾಗಿದ್ದಾರೆ ಎಂಬುದು ನಿಜ, ವಿರೋಧ ಪಕ್ಷದ ನಾಯಕನಾಗಿ ಅದು ಸಹಜವೂ ಹೌದು. ಆದರೆ ವಿದೇಶಿ ನೆಲದಲ್ಲಿ ಭಾರತವನ್ನು ಅಪಮಾನ ಮಾಡುವಂತಹ ಅವರ ಹೇಳಿಕೆಗಳು ಭಾರತೀಯರ ಹೃದಯವನ್ನು ಘಾಸಿಗೊಳಿಸುತ್ತಿವೆ.
ಹಲವಾರು ಸಂದರ್ಭಗಳಲ್ಲಿ ರಾಹುಲ್ ಅವರು ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿ ಇನ್ನಿಲ್ಲದ ಟೀಕೆಗಳಿಗೆ ಒಳಗಾಗಿದ್ದರೂ ಅವರಿಗೆ ಬುದ್ಧಿ ಮಾತ್ರ ಬಂದಿಲ್ಲ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ‘ಮೊಹಬ್ಬತ್ ಕಿ ದುಕಾನ್’ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ತಮ್ಮ ಎಂದಿನ ಛಾಳಿಯನ್ನು ಮುಂದುವರೆಸಿದ್ದಾರೆ. ಈ ಬಾರಿ, ಒಂದು ಹೆಜ್ಜೆ ಮುಂದೆ ಹೋಗಿ ಹೊಸ ಸಂಸತ್ತು ಮತ್ತು ಪವಿತ್ರ ಸೆಂಗೋಲ್ ಅನ್ನು ಅವಮಾನಿಸಿದ್ದಾರೆ. ಬಿಜೆಪಿ ಸರ್ಕಾರದ ಹೊಸ ಸಂಸತ್ತಿನ ಉದ್ಘಾಟನೆ ರಾಷ್ಟ್ರದಲ್ಲಿನ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸಿದ ನಾಟಕವಾಗಿದೆ ಎಂದು ಹೇಳಿದ್ದಾರೆ.
“ಹೊಸ ಸಂಸತ್ ಭವನವು ಗಮನ ಬೇರೆಡೆ ಸೇಳೆಯುವ ನಾಟಕವಲ್ಲದೆ ಮತ್ತೇನೂ ಅಲ್ಲ, ಮತ್ತು ಸೆಂಗೋಲ್ (ರಾಜದಂಡ) ಸ್ಥಾಪನೆಯು ಜನರನ್ನು ದಿಕ್ಕು ತಪ್ಪಿಸುವ ನಾಟಕವಾಗಿದೆ. ಬಿಜೆಪಿಯು ನಿಜವಾಗಿಯೂ ದೇಶ ಎದುರಿಸುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಮತ್ತು ಕುಸಿಯುತ್ತಿರುವ ನೈಜ ಸಮಸ್ಯೆಗಳನ್ನು ಚರ್ಚಿಸಲು ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆಗಳು, ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ದಲಿತರಂತಹ ಸಮುದಾಯಗಳು ಕೋಪ ಮತ್ತು ದ್ವೇಷದ ಹರಡುವಿಕೆಯಿಂದಾಗಿ ಆಕ್ರಮಣಕ್ಕೆ ಒಳಗಾಗುತ್ತಿವೆ” ಎಂದು ರಾಹುಲ್ ಗಾಂಧಿ ಯು.ಎಸ್ನಲ್ಲಿ ಹೇಳಿದ್ದಾರೆ.
ಅವರ ಈ ಹೇಳಿಕೆಗಳು ಭಾರತೀಕರನ್ನು ಆಕ್ರೋಶಿತರನ್ನಾಗಿ ಮಾಡಿದೆ, ಕಾಂಗ್ರೆಸ್ ಪಕ್ಷ ಭಾರತದ ಪರಂಪರೆ, ಸಂಸ್ಕೃತಿಯನ್ನು ಎಷ್ಟೊಂದು ದ್ವೇಷಿಸುತ್ತದೆ ಎಂಬುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.