ಮುಂಬಯಿ: ಮಹಾರಾಷ್ಟ್ರದ ಅಹಮದ್ನಗರವನ್ನು ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಅಹ್ಮದ್ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಿಸಿದರು.
ಮರಾಠಾ ಸಾಮ್ರಾಜ್ಯದ ರಾಣಿ ಮತ್ತು ಅಹಮದ್ನಗರ ಜಿಲ್ಲೆಯ ಚೊಂಡಿ ಗ್ರಾಮದಲ್ಲಿ ಜನಿಸಿದ ಅಹಲ್ಯಾಬಾಯಿ ಹೋಳ್ಕರ್ ಅವರಿಗೆ ಅಹಲ್ಯಾ ನಗರವನ್ನು ಸಮರ್ಪಿಸಲಾಗುವುದು ಎಂದಿದ್ದಾರೆ.
18 ನೇ ಶತಮಾನದ ರಾಣಿಯ 298 ನೇ ಜನ್ಮದಿನವನ್ನು ಅಹಲ್ಯಾಬಾಯಿ ಹೋಳ್ಕರ್ ಜಯಂತಿ ಎಂದು ಆಚರಿಸಲಾಗುತ್ತದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸರ್ಕಾರವು ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಅನ್ನು ಕ್ರಮವಾಗಿ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ಎಂದು ಮರುನಾಮಕರಣ ಮಾಡಿದ ನಂತರ ಬಿಜೆಪಿ ಫೆಬ್ರವರಿಯಿಂದ ಅಹಮದ್ನಗರ ಜಿಲ್ಲೆಯ ಮರುನಾಮಕರಣಕ್ಕೆ ಒತ್ತಾಯಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.