ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನೀಡಿದ ಕರೆಗೆ ಉತ್ತಮ ಸ್ಪಂದನೆ ದೊರೆತಿದೆ. ಮಣಿಪುರ ಪೊಲೀಸರ ಮುಂದೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಪ್ಪಿಸುವಂತೆ ಶಾ ಮನವಿ ಮಾಡಿದ ಒಂದು ದಿನದ ನಂತರ, ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದ ವಿವಿಧ ಸ್ಥಳಗಳಲ್ಲಿ ಸುಮಾರು 140 ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಶುಕ್ರವಾರ ಸುಮಾರು 140 ಶಸ್ತ್ರಾಸ್ತ್ರಗಳನ್ನು ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ, ಶಾ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ವಿಫಲರಾದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದರು ಮತ್ತು ಜನಾಂಗೀಯ ಘರ್ಷಣೆಗಳಿಂದ ನಲುಗಿರುವ ರಾಜ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲು ಕೂಂಬಿಂಗ್ ಕಾರ್ಯಾಚರಣೆಗಳನ್ನು ಘೋಷಿಸಿದ್ದರು.
ವೀಡಿಯೊವೊಂದರಲ್ಲಿ ಮಣಿಪುರ ಪೊಲೀಸರು ಮಣಿಪುರದ ವಿವಿಧ ಸ್ಥಳಗಳಿಂದ ಸಂಗ್ರಹಿಸಲಾದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪ್ರದರ್ಶಿಸಿದ್ದಾರೆ. ಶರಣಾದ ಶಸ್ತ್ರಾಸ್ತ್ರಗಳಲ್ಲಿ SLR 29, ಕಾರ್ಬೈನ್, AK, INSAS ರೈಫಲ್, INSAS LMG, .303 ರೈಫಲ್, 9mm ಪಿಸ್ತೂಲ್, .32 ಪಿಸ್ತೂಲ್, M16 ರೈಫಲ್, ಸ್ಮೋಕ್ ಗನ್ ಮತ್ತು ಟಿಯರ್ ಗ್ಯಾಸ್, ಸ್ಥಳೀಯವಾಗಿ ತಯಾರಿಸಿದ ಪಿಸ್ತೂಲ್, ಸ್ಟನ್ ಗನ್, ಮಾರ್ಪಡಿಸಿದ ರೈಫಲ್, JVP ಮತ್ತು ಏ. ಗ್ರೆನೇಡ್ ಲಾಂಚರ್ ಸೇರಿವೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.