ಅಯೋಧ್ಯೆ: ನೂತನವಾಗಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ರಾಮನ ನೂತನ ವಿಗ್ರಹದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಪ್ರಕಾರ, ಇತ್ತೀಚಿನ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಅಕ್ಟೋಬರ್ ವೇಳೆಗೆ ದೇವಸ್ಥಾನದ ನೆಲ ಮಹಡಿ ಪೂರ್ಣಗೊಳ್ಳಲಿದೆ ಎಂದು ಹೇಳಿದ ಅವರು, ಕಾರ್ಯಾಚರಣೆಯ ಪ್ರಯೋಗವಾಗಿ ಎರಡು ತಿಂಗಳು ಕಳೆಯಲಾಗುತ್ತದೆ ಮತ್ತು ಡಿಸೆಂಬರ್ ವೇಳೆಗೆ ಅದನ್ನು ಭಕ್ತರಿಗೆ ಮುಕ್ತಗೊಳಿಸಲಾಗುತ್ತದೆ. ಪ್ರಧಾನಿಗೆ ಪತ್ರವನ್ನು ಕಳುಹಿಸಿ ಡಿಸೆಂಬರ್ ಮತ್ತು ಜನವರಿ 26, 2024 ರ ನಡುವೆ ಯಾವುದೇ ಸೂಕ್ತ ದಿನಾಂಕಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಈ ಪತ್ರಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸಹಿ ಹಾಕಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಿದ ನಂತರ, ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲು ದೇವಾಲಯವನ್ನು ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ.
ಆದರೆ, ಮಂದಿರದ ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ದಿನಾಂಕ ನಿಗದಿಯಾಗಿಲ್ಲ ಎಂದು ರಾಯ್ ಹೇಳಿದ್ದಾರೆ.
ದೇವಾಲಯದ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು, ದಿನಾಂಕಗಳ ಬಗ್ಗೆ ಜ್ಯೋತಿಷಿಗಳ ಸಲಹೆಯನ್ನು ಪಡೆಯುತ್ತಿದ್ದಾರೆ. ಸೂಕ್ತ ದಿನಾಂಕಕ್ಕಾಗಿ ಇದುವರೆಗೆ ಏಳು ಜ್ಯೋತಿಷಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.