ನವದೆಹಲಿ: ಗಲ್ವಾನ್ ಘರ್ಷಣೆಯ ಬಳಿಕ ಭಾರತ-ಚೀನಾದ ಗಡಿಯಲ್ಲಿ ಭಾರತೀಯ ವಾಯುಸೇನೆಯ ಸಾಮರ್ಥ್ಯ ಸಾಕಷ್ಟು ವೃದ್ಧಿಯಾಗಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು ಹೇಳಿದ್ದಾರೆ.
ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಉತ್ತರ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಭಾರತೀಯ ವಾಯುಸೇನೆಗೆ ಸಂಪೂರ್ಣವಾಗಿ ಅರಿವಿದೆ ಎಂದು ಹೇಳಿದ್ದಾರೆ.
ಅಲ್ಲದೇ 2020 ರಲ್ಲಿ ನಡೆದ ಗಾಲ್ವಾನ್ ಕಣಿವೆ ಬಿಕ್ಕಟ್ಟಿನ ನಂತರ, ವಾಯುಪಡೆ ನಿರಂತರವಾಗಿ ತನ್ನ ಸಾಮರ್ಥ್ಯವನ್ನು ಸುಧಾರಿಸುತ್ತಿದೆ ಮತ್ತು ಬದಲಾಗುತ್ತಿದೆ ಎಂದು ಪ್ರತಿಪಾದಿಸಿದರು. ಯಾವುದೇ ಬೆದರಿಕೆಯನ್ನು ನಿಭಾಯಿಸಲು ತಂತ್ರಗಳನ್ನು ಅನುಸರಿಸುತ್ತಿದೆ ಎಂದರು. ಮೂರು ಚಳಿಗಾಲದಲ್ಲಿ ನಾವು ಸಾಕಷ್ಟು ಮೂಲಸೌಕರ್ಯಗಳನ್ನು ರಚಿಸಿದ್ದೇವೆ ಮತ್ತು ನಮ್ಮ ಎಲ್ಲಾ ಆಸ್ತಿಗಳ ಸಮರ್ಪಕ ನಿಯೋಜನೆಯನ್ನು ಖಾತ್ರಿಪಡಿಸಿದ್ದೇವೆ ಎಂದು ಹೇಳಿದರು.
ಯಾವುದೇ ಸವಾಲನ್ನು ಎದುರಿಸಲು ನಾವು ಯಾವಾಗಲೂ 24×7 ಸಿದ್ಧತೆಯಲ್ಲಿದ್ದೇವೆ. ನಮ್ಮ ಉತ್ತರದ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ. ಅಲ್ಲಿ ಏನು ನಡೆಯುತ್ತಿದೆ ಎಂಬುದರ ಮೇಲೆ ನಾವು ನಿಯಮಿತ ಕಣ್ಗಾವಲು ಇರಿಸುತ್ತೇವೆ. ನಿಯೋಜನೆಯ ತತ್ವವು ಯಾವಾಗಲೂ ಅಲ್ಲಿಂದ ಹೊರಹೊಮ್ಮುವ ಬೆದರಿಕೆಗಳನ್ನು ಆಧರಿಸಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.