ನವದೆಹಲಿ: ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳನ್ನು ಆಧರಿಸಿದ ‘ಅಮೃತಕಾಲ್ ಕಿ ಓರ್’ ಎಂಬ ಪುಸ್ತಕವನ್ನು ನವದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಡ್ಡಾ, ಮೋದಿ ಸರ್ಕಾರದ ಒಂಬತ್ತು ವರ್ಷಗಳ ಅವಧಿಯು ದೇಶವನ್ನು ಪರಿವರ್ತಿಸಿದೆ ಮತ್ತು ಅದರ ಪ್ರಗತಿಯನ್ನು ಇಂದು ಜಗತ್ತು ಗುರುತಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಸಾಕಷ್ಟು ಬದಲಾವಣೆಗಳಾಗಿದೆ ಎಂದ ಅವರು, ನೀತಿ ಪಾರ್ಶ್ವವಾಯುದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸರ್ಕಾರದವರೆಗೆ ರಾಜಕೀಯ ಸಂಸ್ಕೃತಿಯು ತೀವ್ರವಾಗಿ ಬದಲಾಗಿದೆ. ಈ ಹಿಂದೆ ವೋಟ್ ಬ್ಯಾಂಕ್ ರಾಜಕಾರಣ ನಡೆಯುತ್ತಿದ್ದು, ಈಗ ರಿಪೋರ್ಟ್ ಕಾರ್ಡ್ ರಾಜಕಾರಣ ನಡೆಯುತ್ತಿದೆ ಎಂದಿದ್ದಾರೆ.
ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತವು ಹೊಸ ದಾಖಲೆಗಳನ್ನು ಸ್ಥಾಪಿಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕನಿಗೆ ಭಾರತದ ಹೆಮ್ಮೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಾರೆ, ಹಿಂದೂ-ಮುಸ್ಲಿಂ ಎಂದು ವಿಭಜಿಸುವ ಬಗ್ಗೆ ಮಾತನಾಡುತ್ತಾರೆ ಮತ್ತೊಂದೆಡೆ ಪ್ರೀತಿಯ ಅಂಗಡಿ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಯಾವುದೇ ಪ್ರೀತಿಯ ಅಂಗಡಿಯನ್ನು ನಡೆಸುತ್ತಿಲ್ಲ ಆದರೆ ದ್ವೇಷದ ಮೆಗಾ ಶಾಪಿಂಗ್ ಮಾಲ್ ಅನ್ನು ತೆರೆದಿದ್ದಾರೆ ಎಂದು ನಡ್ಡಾ ರಾಹುಲ್ಗೆ ಟಾಂಗ್ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.