ನವದೆಹಲಿ: ವಿದೇಶಾಂಗ ಸಚಿವ ಜೈ ಶಂಕರ್ ಅವರು ಗುರುವಾರ ನವದೆಹಲಿಯಲ್ಲಿ 1984ರ ಸಿಖ್ ವಿರೋಧಿ ಗಲಭೆ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದರು.
ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ ಸಿಖ್ ವಿರೋಧಿ ದಂಗೆಯ ಸಂತ್ರಸ್ತರನ್ನು ಭೇಟಿ ಮಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸಮಸ್ಯೆಗಳನ್ನು ಕೇಂದ್ರ ಸರ್ಕಾರವು ಪರಿಹರಿಸಲಿದೆ ಎಂದು ಭರವಸೆ ನೀಡಿದರು. “ನಾವು 1984 ರ ಗಲಭೆಗಳ ಸಂತ್ರಸ್ತರ ಸಮಸ್ಯೆಗಳನ್ನು ಕೇಳಿದ್ದೇವೆ. ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ನಾವು ಅವರಿಗೆ ಭರವಸೆ ನೀಡಿದ್ದೇವೆ. ಅಷ್ಟೇ ಅಲ್ಲದೇ ನಾನು ಉಕ್ರೇನ್ನಿಂದ ಹಿಂದಿರುಗಿದ ವಿದ್ಯಾರ್ಥಿಗಳಲ್ಲಿ ಒಬ್ಬರನ್ನು ಭೇಟಿ ಮಾಡಿದ್ದೇನೆ ಮತ್ತು ಉಕ್ರೇನ್ನಲ್ಲಿ ಕಠಿಣ ಸಮಯದಲ್ಲಿ ನಮ್ಮ ರಾಯಭಾರ ಕಚೇರಿ ಅವರನ್ನು ಹೇಗೆ ಬೆಂಬಲಿಸಿತು ಎಂಬುದರ ಕುರಿತು ಅವರು ನನಗೆ ಪ್ರತಿಕ್ರಿಯೆ ನೀಡಿದರು” ಎಂದು ಜೈಶಂಕರ್ ಹೇಳಿದ್ದಾರೆ.
ಜೈಶಂಕರ್ ರಾಷ್ಟ್ರ ರಾಜಧಾನಿಯ ತಿಲಕ್ ವಿಹಾರ್ ಪ್ರದೇಶದಲ್ಲಿ ಸಿಖ್ ವಿರೋಧಿ ದಂಗೆಯ ಸಂತ್ರಸ್ತರನ್ನು ಭೇಟಿಯಾದರು. ಅದಕ್ಕೂ ಮೊದಲು ಬುಧವಾರ ಅವರು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಸಿಖ್ಖರನ್ನು ಭೇಟಿಯಾದರು. ಈ ವೇಳೆ ಪೌರತ್ವ ಮತ್ತು ವೀಸಾಗಳಿಗೆ ಸಂಬಂಧಿಸಿದಂತೆ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತದೆ ಮತ್ತು ಅವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದರು.
“ನಾನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಸಿಖ್ಖರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಬಯಸಿದ್ದೆ. ಅವರಿಗೆ ವೀಸಾ ಮತ್ತು ಪೌರತ್ವಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ. ಅವರು ನಮ್ಮೊಂದಿಗೆ ಚರ್ಚಿಸಿದ ಸಮಸ್ಯೆಗಳನ್ನು ನಾವು ಪರಿಹರಿಸುತ್ತೇವೆ. ಕೆಲವರು ತಮ್ಮ ಪೌರತ್ವ ಪಡೆಯಲು ಇನ್ನೂ ಕಾಯುತ್ತಿದ್ದಾರೆ. ಪೌರತ್ವ ಮತ್ತು ವೀಸಾಗಳಿಗೆ ಸಂಬಂಧಿಸಿದಂತೆ ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತೇವೆ, ಅವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ, ”ಎಂದು ಅವರು ಹೇಳಿದರು.
1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮೇ 20 ರಂದು ಚಾರ್ಜ್ ಶೀಟ್ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.