ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುರಿನಾಮ್ ಮತ್ತು ಸೆರ್ಬಿಯಾ ಎರಡು ರಾಷ್ಟ್ರಗಳಿಗೆ ಆರು ದಿನಗಳ ಭೇಟಿಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿ ನವದೆಹಲಿಗೆ ಮರಳಿದ್ದಾರೆ. ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮತ್ತು ಕುಟುಂಬ ಕಲ್ಯಾಣ ಡಾ. ಭಾರತಿ ಪ್ರವೀಣ್ ಪವಾರ್ ಮತ್ತು ಸಂಸತ್ತಿನ ಹಲವಾರು ಬುಡಕಟ್ಟು ಸದಸ್ಯರು ರಾಷ್ಟ್ರಪತಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡಿದರು.
ಈ ವೇಳೆ ಮಾತನಾಡಿದ ಭೂ ವಿಜ್ಞಾನದ ಕೇಂದ್ರ ಸಚಿವ ಕಿರಣ್ ರಿಜಿಜು, ರಾಷ್ಟ್ರಪತಿ ಮುರ್ಮು ಅವರಿಗೆ ಸುರಿನಾಮ್ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿರುವುದು ತುಂಬಾ ಸಂತೋಷವಾಗಿದೆ ಎಂದು ಹೇಳಿದರು.
. ಉಭಯ ರಾಷ್ಟ್ರಗಳ ಉನ್ನತ ನಾಯಕತ್ವದೊಂದಿಗೆ ಮಹತ್ವದ ಮಾತುಕತೆ ನಡೆಸಿರುವ ರಾಷ್ಟ್ರಪತಿಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಮಾತ್ರವಲ್ಲದೇ ಹತ್ತು ಹಲವು ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.
ಮುರ್ಮು ಅವರು ಮೂರು ದಿನಗಳ ಭೇಟಿಗಾಗಿ ಭಾನುವಾರ ಸುರಿನಾಮ್ಗೆ ಆಗಮಿಸಿದರು. ಕಳೆದ ವರ್ಷ ಜುಲೈನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಇಲ್ಲಿಗೆ ಅವರ ಮೊದಲನೆಯ ಭೇಟಿಯಾಗಿದೆ. ಅಲ್ಲಿ ಅವರು ಸುರಿನಾಮ್ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿಯನ್ನು ಭೇಟಿ ಮಾಡಿದರು ಮತ್ತು ರಕ್ಷಣೆ, ಐಟಿ ಮತ್ತು ಸಾಮರ್ಥ್ಯ ವರ್ಧನೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಆಳಗೊಳಿಸುವ ಮಾರ್ಗಗಳನ್ನು ಚರ್ಚಿಸಿದರು. ಸುರಿನಾಮ್ನಿಂದ, ಸೆರ್ಬಿಯಾಗೆ ತೆರಳಿ ಅಲ್ಲಿನ ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರನ್ನು ಭೇಟಿಯಾದರು ಮತ್ತು ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.