ನವದೆಹಲಿ: ಅಮರನಾಥ ಯಾತ್ರೆಯ ಸಿದ್ಧತೆಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು. 62 ದಿನಗಳ ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಗಲಿದ್ದು, ಈ ವರ್ಷ ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ನಿನ್ನೆ ನಡೆದ ಸಭೆಯಲ್ಲಿ, ಅಮರನಾಥ ಯಾತ್ರಾರ್ಥಿಗಳು ಆರಾಮದಾಯಕವಾಗಿ ದರ್ಶನ ಪಡೆಯಬೇಕು ಮತ್ತು ಯಾವುದೇ ತೊಂದರೆಯನ್ನು ಎದುರಿಸಬಾರದು ಎಂಬುದು ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ಶಾ ಹೇಳಿದರು.
ಅಮರನಾಥ ಯಾತ್ರೆಯ ಸಂಪೂರ್ಣ ಮಾರ್ಗದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದಿಂದ ಯಾತ್ರಾ ಬೇಸ್ ಕ್ಯಾಂಪ್ಗೆ ಹೋಗುವ ಮಾರ್ಗದಲ್ಲಿ ಸುಗಮ ವ್ಯವಸ್ಥೆ ಕಲ್ಪಿಸಲು ಗೃಹ ಸಚಿವರು ಒತ್ತು ನೀಡಿದರು. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ರಾತ್ರಿ ಶ್ರೀನಗರ ಮತ್ತು ಜಮ್ಮುವಿನಿಂದ ವಿಮಾನ ಸೇವೆಯನ್ನು ಒದಗಿಸುವಂತೆ ಅವರು ಕರೆ ನೀಡಿದರು.
ಸಭೆಯಲ್ಲಿ, ಅಮರನಾಥ ಯಾತ್ರೆಯ ಎಲ್ಲಾ ಯಾತ್ರಾರ್ಥಿಗಳಿಗೆ ರೇಡಿಯೊ ತರಂಗಾಂತರ ಗುರುತಿನ ಚೀಟಿಗಳನ್ನು ನೀಡಲಾಗುವುದು, ಇದರಿಂದಾಗಿ ಅವರ ನೈಜ ಸ್ಥಳವನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.