ನವದೆಹಲಿ: ರೈತರ ಖಾತೆಗಳನ್ನು ನಿರ್ಬಂಧಿಸಲು ಭಾರತ ಸರಕಾರವು ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ ಟ್ವಿಟರ್ ಮೇಲೆ ಹೆಚ್ಚಿನ ಒತ್ತಡವನ್ನು ಹೇರಿತ್ತು ಎಂಬ ಟ್ವಿಟರ್ ಸಹ ಸಂಸ್ಥಾಪಕ ಜಾಕ್ ಡೋರ್ಸೆ ಅವರ ಆರೋಪಕ್ಕೆ ಕೇಂದ್ರವು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಆರೋಪವನ್ನು ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ.
ಅಲ್ಲದೇ ಭಾರತದಲ್ಲಿ ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಯಾರ ಟ್ವಿಟರ್ ಖಾತೆಯನ್ನೂ ಸ್ಥಗಿತಗೊಳಿಸಲಾಗಲಿಲ್ಲ ಎಂದಿರುವ ಅವರು, ಡಾರ್ಸೆ ಅವರ ನೇತೃತ್ವದಲ್ಲಿ ಟ್ವಿಟರ್ ಆಡಳಿತವು ಭಾರತೀಯ ಕಾನೂನಿನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಲು ಸಮಸ್ಯೆಯನ್ನು ಎದುರಿಸುತ್ತಿತ್ತು ಎಂದಿದ್ದಾರೆ.
“ಇದು ಜಾಕ್ ಡೋರ್ಸೆ ಅವರ ಸಂಪೂರ್ಣ ಸುಳ್ಳು – ಬಹುಶಃ ಟ್ವಿಟರ್ ಇತಿಹಾಸದ ಅತ್ಯಂತ ಸಂಶಯಾಸ್ಪದ ಅವಧಿಯನ್ನು ಹೊರಹಾಕುವ ಪ್ರಯತ್ನ” ಎಂದು ಸಚಿವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
“ಡಾರ್ಸೆ ಮತ್ತು ಅವರ ತಂಡದ ಅಡಿಯಲ್ಲಿ ಟ್ವಿಟರ್ ಭಾರತೀಯ ಕಾನೂನನ್ನು ಪದೇ ಪದೇ ಉಲ್ಲಂಘಿಸಿದೆ. ವಾಸ್ತವವಾಗಿ, ಅವರು 2020 ರಿಂದ 2022 ರವರೆಗೆ ಸಾಕಷ್ಟು ಬಾರಿ ಕಾನೂನನ್ನು ಅನುಸರಿಸಲಿಲ್ಲ. ಆದರೂ ಯಾರೂ ಜೈಲಿಗೆ ಹೋಗಲಿಲ್ಲ ಅಥವಾ ಟ್ವಿಟರ್ ಸ್ಥಗಿತಗೊಂಡಿಲ್ಲ” ಎಂದಿದ್ದಾರೆ.
ಇನ್ನೊಂದೆಡೆ ಡಾರ್ಸಿ ಅವರ ಹೇಳಿಕೆ ಈಗ ವಿಪಕ್ಷಗಳಿಗೆ ಆಹಾರವಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಲು ಪ್ರಾರಂಭಿಸಿದೆ. ಡಾರ್ಸಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಟ್ವಿಟರ್ನಲ್ಲಿ ಹಂಚಿಕೊಂಡ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.