ನವದೆಹಲಿ: ಇಂದು ಮಧ್ಯಾಹ್ನ ದೆಹಲಿ-ಎನ್ಸಿಆರ್ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ವರದಿಗಳ ಪ್ರಕಾರ, ಮೊಹಾಲಿಯ ಪಂಚಕುಲದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ.
ಜಮ್ಮು-ಕಾಶ್ಮೀರದ ದೋಡಾ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ವರದಿಯಾಗಿಲ್ಲ. ಭಾರತ ಮತ್ತು ಪಾಕಿಸ್ತಾನದ ವಿವಿಧ ಭಾಗಗಳ ದೃಶ್ಯಗಳು ವಿಡಿಯೋದಲ್ಲಿ ಹರಿದಾಡುತ್ತಿದ್ದು, ಜನರು ಆತಂಕಗೊಂಡು ಓಡುವುದು ಮತ್ತು ಪೀಠೋಪಕರಣಗಳು ಅಲುಗಾಡುತ್ತಿರುವುದನ್ನು ನೋಡಬಹುದು.
ಭೂಕಂಪದ ಕುರಿತು ಹೆಚ್ಚಿನ ವಿವರಗಳನ್ನು ನೀಡಿದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಅಧಿಕೃತ ಹೇಳಿಕೆಯನ್ನು ನೀಡಿ, “ಜಮ್ಮು-ಕಾಶ್ಮೀರದ ದೋಡಾದಲ್ಲಿ ಇಂದು 5.4 ತೀವ್ರತೆಯ ಭೂಕಂಪ ದಾಖಲಾಗಿದೆ. ಹಿಮಾಚಲಪ್ರದೇಶ, ಚಂಡೀಗಢ, ಪಂಜಾಬ್ ಮತ್ತು ಎಲ್ಲಾ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಂಪನಗಳು ಸಂಭವಿಸಿದೆ. ಆದರೆ ಮುಖ್ಯ ಕಂಪನಕ್ಕಿಂತ ಇದ ಕಡಿಮೆ ಪ್ರಮಾಣದಲ್ಲಿರಬಹುದು” ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಡಾ ಒಪಿ ಮಿಶ್ರಾ ಹೇಳಿದ್ದಾರೆ.
जम्मू-कश्मीर में किश्तवाड़ से 30 किमी दक्षिण पूर्व में रिक्टर पैमाने पर 5.7 तीव्रता का भूकंप आया: EMSC
(वीडियों पूंछ का है) pic.twitter.com/smUr41Sput
— ANI_HindiNews (@AHindinews) June 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.