ಶ್ರೀನಗರ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ‘ಭಯೋತ್ಪಾದನೆ ನಿಧಿ’ ಪ್ರಕರಣದಲ್ಲಿ ಶ್ರೀನಗರದ ಮಾಲೂರಾ ಶಾಲ್ತೆಂಗ್ ಪ್ರದೇಶದಲ್ಲಿ ಮೊಹಮ್ಮದ್ ಅಕ್ಬರ್ ಖಂಡೇ ಅಲಿಯಾಸ್ ಅಯಾಜ್ ಅಕ್ಬರ್ ಎಂಬ ಪ್ರತ್ಯೇಕತಾವಾದಿ ನಾಯಕನ ಎರಡು ಆಸ್ತಿಗಳನ್ನು ಜಪ್ತಿ ಮಾಡಿದೆ.
ಹುರಿಯತ್ ನಾಯಕ ಅಯಾಜ್ ಅಕ್ಬರ್ ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧನದಲ್ಲಿದ್ದಾನೆ. 2017ರ ಜುಲೈನಲ್ಲಿ ಉಗ್ರಗಾಮಿಗಳಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಎನ್ಐಎ ಅವನನ್ನು ಬಂಧಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಜಹೂರ್ ಅಹ್ಮದ್ ಶಾ ವತಾಲಿ ಎಂಬಾತನಿಗೆ ಸೇರಿದ 17 ಆಸ್ತಿಗಳನ್ನು ಎನ್ಐಎ ಮುಟ್ಟುಗೋಲು ಹಾಕಿಕೊಂಡ ಒಂದು ದಿನದ ನಂತರ ಅಯಾಜ್ ಮನೆಯನ್ನು ಜಪ್ತಿ ಮಾಡಲಾಗಿದೆ. ವತಾಲಿ ವಿವಿಧ ಮೂಲಗಳಿಂದ ಸಂಗ್ರಹಿಸಿದ ಹಣವನ್ನು ಹುರಿಯತ್ ನಾಯಕರಿಗೆ ಭಾರತದದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕತೆಯನ್ನು ಉತ್ತೇಜಿಸಲು ಕಳುಹಿಸುತ್ತಿದ್ದ ಎಂದು ಎನ್ಐಎ ಹೇಳಿದೆ.
“ಈ ಸಂಘಟನೆಗಳು ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ದಾಳಿಗಳನ್ನು ಉತ್ತೇಜಿಸುವ ಮತ್ತು ನಡೆಸುವ ಮೂಲಕ ಭಯೋತ್ಪಾದನೆ ಮತ್ತು ಕಣಿವೆಯಲ್ಲಿ ಹಿಂಸಾಚಾರವನ್ನು ನಡೆಸುತ್ತಿವೆ” ಎಂದು ಎನ್ಐಎ ಹೇಳಿದೆ. ಈ ನಿಷೇಧಿತ ಭಯೋತ್ಪಾದಕ ಗುಂಪುಗಳು 1993 ರಲ್ಲಿ ರಚನೆಯಾದ ಆಲ್ ಪಾರ್ಟಿ ಹುರಿಯತ್ ಕಾನ್ಫರೆನ್ಸ್ (APHC) ಅನ್ನು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ನಡೆಸುವ ಮತ್ತು ಬೆಂಬಲಿಸುವ ಒಂದು ಸಂಘವಾಗಿ ಮುನ್ನಡೆಸುತ್ತಿದ್ದವು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.