ಅಹಮದಾಬಾದ್: ಗುಜರಾತ್ನಲ್ಲಿ ಬಿಪರ್ಜೋಯ್ ಚಂಡಮಾರುತವು ಅಕ್ಷರಶಃ ವಿನಾಶವನ್ನೇ ಉಂಟು ಮಾಡಿದೆ. ಅಪಾರ ಸಂಖ್ಯೆಯ ಮರಗಳು ನೆಲಕ್ಕೆ ಉರುಳಿದ್ದು, ಹಲವಾರು ವಾಹನಗಳು ಮತ್ತು ಮನೆಗಳು ಹಾನಿಗೊಳಗಾಗಿವೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. ಚಂಡಮಾರುತವು ಇಂದು ಸಂಜೆ ರಾಜಸ್ಥಾನದಲ್ಲಿ ವಾಯುಭಾರ ಕುಸಿತವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ.
ಬಿಪರ್ಜೋಯ್ ಚಂಡಮಾರುತವು ಸೌರಾಷ್ಟ್ರ ಮತ್ತು ಕಚ್ನಲ್ಲಿ ಮಧ್ಯಾಹ್ನದ ವೇಳೆಗೆ ಸೈಕ್ಲೋನಿಕ್ ಸ್ಟಾರ್ಮ್ ಆಗಿ ಕ್ರಮೇಣ ದುರ್ಬಲಗೊಳ್ಳುವ ಸಾಧ್ಯತೆಯಿದೆ ಮತ್ತು ನಂತರ ಸಂಜೆಯ ಹೊತ್ತಿಗೆ ಆಳವಾದ ಡಿಪ್ರೆಶನ್ಗೆ ಒಳಗಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಇತ್ತೀಚಿನ ಬುಲೆಟಿನ್ನಲ್ಲಿ ತಿಳಿಸಿದೆ.
ಗುಜರಾತಿನ ವಿವಿಧ ಸ್ಥಳಗಳಲ್ಲಿ 524 ಮರಗಳು ಮತ್ತು ವಿದ್ಯುತ್ ಕಂಬಗಳು ಚಂಡಮಾರುತದಿಂದ ಧರಾಶಾಯಿಯಾಗಿವೆ. ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆಯಾಗಿದ್ದು, ಸುಮಾರು 940 ಹಳ್ಳಿಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. ಭವನಗರ ಜಿಲ್ಲೆಯಲ್ಲಿ ಸಿಕ್ಕಿಬಿದ್ದ ಮೇಕೆಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ದನ-ಪಾಲಕ ಮತ್ತು ಅವರ ಮಗ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.
ಇಂದು ರಾಜಸ್ಥಾನದಲ್ಲಿ ಬಿಪರ್ಜೋಯ್ ತನ್ನ ಪ್ರಭಾವ ತೋರಿಸಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.