ಕೋಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಶುಕ್ರವಾರ ದಕ್ಷಿಣ 24 ಪರಗಣಗಳ ಭಾಂಗಾರ್ಗೆ ಭೇಟಿ ನೀಡಿ ಪಂಚಾಯತ್ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಸಮಯದಲ್ಲಿ ನಡೆದ ಹಿಂಸಾಚಾರದ ಪರಿಣಾಮವನ್ನು ಪರಿಶೀಲಿಸಿದರು. ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಜೂನ್ 15 ರಂದು ಹಿಂಸಾಚಾರ ವರದಿಯಾಗಿದೆ.
ಹಿಂಸಾಚಾರದ ಪ್ರತ್ಯಕ್ಷ ವರದಿಗಳನ್ನು ತೆಗೆದುಕೊಂಡ ಬೋಸ್, ಸಂತ್ರಸ್ತರ ಕುಟುಂಬಗಳೊಂದಿಗೆ ಸಂವಾದ ನಡೆಸಿದರು. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸ್ಥಳೀಯರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಬೋಸ್, “ನಾನು ಹಿಂಸಾಚಾರದ ಸಂತ್ರಸ್ತರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದೇನೆ. ಈ ಚುನಾವಣೆಯಲ್ಲಿ ಹಿಂಸಾಚಾರವು ಕೊನೆಯಾಗಲಿದೆ ಎಂದು ನಾನು ಬಂಗಾಳದ ಜನರಿಗೆ ಭರವಸೆ ನೀಡುತ್ತೇನೆ. ಹಿಂಸಾಚಾರದ ದುಷ್ಕರ್ಮಿಗಳನ್ನು ಶಿಕ್ಷಿಸಲಾಗುವುದು. ದೇಶದ ಸಂವಿಧಾನ ಮತ್ತು ಕಾನೂನಿನ ಅಡಿಯಲ್ಲಿ ಶಾಶ್ವತ ರೀತಿಯಲ್ಲಿ ಶಿಕ್ಷಿಸಲಾಗುವುದು. ಬಂಗಾಳದ ಶಾಂತಿ ಪ್ರಿಯ ಜನರು ತಮ್ಮ ಹಕ್ಕು ಚಲಾಯಿಸಲು ಇದರಿಂದ ಸಾಧ್ಯವಾಗಲಿದೆ” ಎಂದಿದ್ದಾರೆ.
ಪಂಚರಾಜ್ಯ ಚುನಾವಣೆಗೂ ಮುನ್ನ ನಡೆದ ಹಿಂಸಾಚಾರದಲ್ಲಿ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ ಬೋಸ್, “ಬಂಗಾಳದಲ್ಲಿ ಚುನಾವಣಾ ಪೂರ್ವದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿ ಆಘಾತವಾಗಿದೆ. ಮಾಧ್ಯಮಗಳ ಮೇಲೂ ದಾಳಿ ನಡೆಸುತ್ತಿದೆ. ಜನರು ದಂಗೆಯೇಳುತ್ತಿದ್ದಾರೆ. ಗೂಂಡಾಗಳು ಅಟ್ಟಹಾಸ ಮೆರೆಯುತ್ತಿದ್ದಾರೆ.ಚುನಾವಣೆಯಲ್ಲಿನ ಗೆಲುವು ಮೃತ ದೇಹಗಳ ಎಣಿಕೆಯ ಮೇಲೆ ಅಲ್ಲ ಮತಗಳ ಎಣಿಕೆಯ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಟಿಎಂಸಿ ಪಕ್ಷವನ್ನು ಕುಟುಕಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.