ನವದೆಹಲಿ: 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಒಳಗೊಂಡ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೋರಖ್ಪುರದ ಗೀತಾ ಪ್ರೆಸ್ಗೆ ಘೋಷಿಸಲಾಗಿದೆ. ಆದರೆ ಗೀತಾ ಪ್ರೆಸ್ ಕೇವಲ ಸ್ಮರಣಿಕೆಯನ್ನು ಮಾತ್ರ ಸ್ವೀಕರಿಸುತ್ತೇವೆ, ನಗದು ಮೊತ್ತವನ್ನು ಸ್ವೀಕರಿಸುವುದಿಲ್ಲ ಎಂದು ಇಂದು ಹೇಳಿದೆ.
ಪ್ರಧಾನಿ ಮೋದಿ ನೇತೃತ್ವದ ತೀರ್ಪುಗಾರರ ಸಮಿತಿಯು ಭಾನುವಾರ ಗೀತಾ ಪ್ರೆಸ್ ಅನ್ನು ಪ್ರಶಸ್ತಿಗೆ ಭಾಜನರಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಿತು.
“2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿರುವ ಗೀತಾ ಪ್ರೆಸ್, ಗೋರಖ್ಪುರವನ್ನು ನಾನು ಅಭಿನಂದಿಸುತ್ತೇನೆ. ಅವರು ಕಳೆದ 100 ವರ್ಷಗಳಲ್ಲಿ ಜನರಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಗಳನ್ನು ಹೆಚ್ಚಿಸಲು ಶ್ಲಾಘನೀಯ ಕೆಲಸ ಮಾಡಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವೀಟ್ ಕೂಡ ಮಾಡಿದ್ದರು.
ಇಂದು ಪ್ರಕಾಶಕರು ಸ್ಮರಣಿಕೆ ಮಾತ್ರ ಸ್ವೀಕರಿಸುವುದಾಗಿ ಹೇಳಿದರು, ಸರ್ಕಾರವು ನಗದು ಬಹುಮಾನದ ಮೊತ್ತವನ್ನು ಬೇರೆ ಉದ್ದೇಶಕ್ಕೆ ಖರ್ಚು ಮಾಡಬೇಕೆಂದು ಸೂಚಿಸಿದೆ.
“ಈ ವರ್ಷ ಈ ಸಂಸ್ಥೆ ತನ್ನ ಶತಮಾನೋತ್ಸವವನ್ನು ಆಚರಿಸುತ್ತಿದೆ.
I congratulate Gita Press, Gorakhpur on being conferred the Gandhi Peace Prize 2021. They have done commendable work over the last 100 years towards furthering social and cultural transformations among the people. @GitaPress https://t.co/B9DmkE9AvS
— Narendra Modi (@narendramodi) June 18, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.