ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿನ ಪ್ರಸ್ತಾವನೆಯನ್ನು ತಡೆದ ಚೀನಾದ ಕ್ರಮವನ್ನು ಭಾರತ ಇಂದು ಖಂಡಿಸಿದೆ.
ಅಂತಾರಾಷ್ಟ್ರೀಯ ಯೋಗ ದಿನದಂದು ಯುಎನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ಗಂಟೆಗಳ ಮೊದಲು ಕಟುವಾದ ಪದಗಳ ಹೇಳಿಕೆ ನೀಡಿರುವ ಭಾರತ, ಹಲವಾರು ಸದಸ್ಯ ರಾಷ್ಟ್ರಗಳು ಸಹ ಪ್ರಾಯೋಜಿಸಿದ ಹೊರತಾಗಿಯೂ ಭಯೋತ್ಪಾದಕನನ್ನು ಕಪ್ಪು ಪಟ್ಟಿಗೆ ಸೇರಿಸುವ ಪ್ರಸ್ತಾಪವು ಈಡೇರದಿದ್ದರೆ “ಜಾಗತಿಕ ಭಯೋತ್ಪಾದನಾ ನಿಗ್ರಹದ ರಚನೆಯಲ್ಲಿ ಖಂಡಿತವಾಗಿಯೂ ಏನೋ ತಪ್ಪಿದೆ” ಎಂದು ನಂಬಲು ನಮಗೆ ಬಲವಾದ ಕಾರಣ ಸಿಗುತ್ತದೆ ಎಂದಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ರ ಅಲ್ ಖೈದಾ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ಸಾಜಿದ್ ಮಿರ್ನನ್ನು ಕಪ್ಪುಪಟ್ಟಿಗೆ ಸೇರಿಸುವ ಪ್ರಸ್ತಾಪವನ್ನು ಭಾರತ ಮತ್ತು ಯುಎಸ್ ಜಂಟಿಯಾಗಿ ಮಂಡಿಸಿದ್ದವು. ಈ ಮೂಲಕ ಆತನ ಸ್ವತ್ತುಗಳನ್ನು ಮುಟ್ಟುಗೋಲು ಹಾಕಲು, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಅನುವು ಮಾಡಿಕೊಡಲು ಮುಂದಾಗಿದ್ದವು. ಆದರೆ ಪಾಕಿಸ್ಥಾನದ ಪರಮ ಮಿತ್ರ ಚೀನಾ ಈ ಪ್ರಸ್ತಾವನೆಯ ಅಂಗೀಕಾರಕ್ಕೆ ಅಡ್ಡಗಾಲು ಹಾಕಿದೆ.
ಸಾಜಿದ್ ಮಿರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 166 ಜನರನ್ನು ಕೊಂದಿದ್ದಕ್ಕಾಗಿ ಅವನ ತಲೆಯ ಮೇಲೆ US $ 5 ಮಿಲಿಯನ್ ಬಹುಮಾನವನ್ನು ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.