ಜಮ್ಮು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕಾಗಿ ಇಂದು ಆಗಮಿಸಲಿದ್ದು, ಕಣಿವೆ ರಾಜ್ಯದಲ್ಲಿ ಆಶಾವಾದ ಮತ್ತು ಕುತೂಹಲ ಮೂಡಿಸಿದ್ದಾರೆ
ವಾರ್ಷಿಕ ಅಮರನಾಥ ಯಾತ್ರೆಗೂ ಮುನ್ನ ರಾಜಕೀಯ ತೊಡಗುವಿಕೆಗಳು, ಅಭಿವೃದ್ಧಿ ಕಾರ್ಯಸೂಚಿ ಮತ್ತು ‘ಭದ್ರತಾ ಸನ್ನಿವೇಶದ ಮೌಲ್ಯಮಾಪನ’ಗಳನ್ನ ಮಾಡುವ ನಿಟ್ಟಿನಲ್ಲಿ ಅವರು ಭೇಟಿ ಕೈಗೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅವರ ಭೇಟಿಯ ಒಂದು ದಿನ ಮುಂಚಿತವಾಗಿ ಗುರುವಾರ ಅವರ ಪ್ರವಾಸದ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಅವರ ಪ್ರವಾಸ ವೇಳಾಪಟ್ಟಿಯು ಎರಡು ರಾಜಧಾನಿ ನಗರಗಳಲ್ಲಿ ಕೋಟ್ಯಂತರ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಒಳಗೊಂಡಿರುತ್ತದೆ ಎಂದು ವರದಿಗಳು ತಿಳಿಸಿವೆ.
ಅಧಿಕೃತ ಪ್ರಯಾಣ ಮಾಹಿತಿಯ ಪ್ರಕಾರ, ಕೇಂದ್ರ ಗೃಹ ಸಚಿವರು ಜಮ್ಮುವಿಗೆ ಆಗಮಿಸಿದ ನಂತರ ಬೆಳಿಗ್ಗೆ 11 ಗಂಟೆಗೆ ತ್ರಿಕೂಟ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿರುವ ಬಿಜೆಪಿ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ತಮ್ಮ ಭೇಟಿಯನ್ನು ಪ್ರಾರಂಭಿಸುತ್ತಾರೆ. ಇಂದು ಜೂನ್ 23 ರಂದು ಮುಖರ್ಜಿಯವರ ಪುಣ್ಯತಿಥಿಯೂ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.