ನವದೆಹಲಿ: ಭಾರತದಲ್ಲಿ ಮುಸ್ಲಿಮರನ್ನು ನಡೆಸಿಕೊಳ್ಳಲಾಗುತ್ತಿರುವ ರೀತಿಯ ಬಗ್ಗೆ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ಪ್ರಶ್ನೆಗಳನ್ನು ಎತ್ತಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಕೇಂದ್ರ ಸರ್ಕಾರ, ಒಬಾಮ ಆಡಳಿತದ ಅವಧಿಯಲ್ಲಿ 6 ಮುಸ್ಲಿಂ ರಾಷ್ಟ್ರಗಳಿಗೆ ಬಾಂಬ್ ಹಾಕಲಾಗಿತ್ತು ಎಂಬುದನ್ನು ನೆನಪಿಸಿಕೊಟ್ಟಿದೆ.
ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಚುನಾವಣಾ ಸೋಲಿನ ನಂತರ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಯಾವುದೇ ಆಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಲೇ ಇವೆ ಎಂದು ಆರೋಪಿಸಿದರು.
ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಬಾಮ ಆಡಳಿತದಲ್ಲಿ ಅಮೆರಿಕಾ ಆರು ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಹೀಗಾಗಿ ಭಾರತೀಯ ಮುಸ್ಲಿಮರ ಬಗ್ಗೆ ಅವರ ಹೇಳಿಕೆಗಳು ಸಮಂಜಸವಲ್ಲ ಎಂದಿದ್ದಾರೆ
“ಗೌರವಾನ್ವಿತ ಪ್ರಧಾನ ಮಂತ್ರಿಗಳು ಸ್ವತಃ ಅಮೆರಿಕಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ, ತಮ್ಮ ಸರ್ಕಾರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ಸಮುದಾಯದ ವಿರುದ್ಧ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಕೆಲವು ಜನರು ಸುಖಾಸುಮ್ಮನೆ ಆಧಾರವಿಲ್ಲದ ಆರೋಪಗಳನ್ನು ಮಾಡಿ ದೊಡ್ಡ ಸುದ್ದಿ ಮಾಡುತ್ತಾರೆ ಎಂದಿದ್ದಾರೆ.
ದೇಶದ ಪ್ರಧಾನಿಯಾಗಿ ಮೋದಿ ಅವರಿಗೆ ದೊರೆತ 13 ಪ್ರಶಸ್ತಿಗಳಲ್ಲಿ 6 ಪ್ರಶಸ್ತಿಗಳನ್ನು ಮುಸ್ಲಿಮರು ಬಹುಸಂಖ್ಯಾತರಾಗಿರುವ ದೇಶಗಳು ನೀಡಿವೆ ಎಂದು ಸೀತಾರಾಮನ್ ಸ್ಮರಿಸಿದ್ದಾರೆ.
“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ಪ್ರಸ್ತಾಪಿಸಬೇಕಾದ ಸಮಸ್ಯೆಗಳಿವೆ. ಅದನ್ನು ನೋಡಿಕೊಳ್ಳುವ ಜನರಿದ್ದಾರೆ. ಕೈಯಲ್ಲಿ ಮೂಲಭೂತ ದತ್ತಾಂಶ ಇಲ್ಲದೆ ಕೇವಲ ಆರೋಪ ಮಾಡುವುದು ಸಂಘಟಿತ ಪ್ರಚಾರಗಳು” ಎಂದಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನನ್ನ ಪ್ರಕಾರ ಅವುಗಳಿಗೆ ಬಿಜೆಪಿ ಅಥವಾ ಪ್ರಧಾನಿ ಮೋದಿಯನ್ನು ಚುನಾವಣಾ ಕ್ಷೇತ್ರದಲ್ಲಿ ಎದುರಿಸಲು ಸಾಧ್ಯವಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.