ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವ ಕಾರ್ಯವನ್ನು ಸೇನೆ ಕಟಿಬದ್ಧವಾಗಿ ನಿರ್ವಹಿಸುತ್ತಿದೆ. ಅಲ್ಲಿನ ಉಗ್ರಗಾಮಿಗಳನ್ನು ಸದೆ ಬಡಿಯುವ ನಿಟ್ಟಿನಲ್ಲಿ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದೆ.
ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಕೈರಾಂಗ್ ತುರೆಲ್ ಮಾಪಾಲ್ನಲ್ಲಿ 27 ಜೂನ್ 2023 ರ ಮುಂಜಾನೆ ಸಮಯದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರ ಬೆಂಬಲದೊಂದಿಗೆ ಸೇನೆಯು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಶೋಧ ಕಾರ್ಯಾಚರಣೆಯಲ್ಲಿ, ಇಬ್ಬರು ಶಂಕಿತರನ್ನು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ-ತರಹದ ಸಾಮಾಗ್ರಿಗಳೊಂದಿಗೆ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಐದು ಶಸ್ತ್ರಾಸ್ತ್ರಗಳು, ಎರಡು ದೇಶೀ ನಿರ್ಮಿತ ಆಯುಧಗಳು, ದೊಡ್ಡ ಪ್ರಮಾಣದ ಮಿಶ್ರಿತ ಮದ್ದುಗುಂಡುಗಳು ಮತ್ತು ಇತರ ವಿವಿಧ ರೀತಿಯ ಯುದ್ಧದ ವಸ್ತುಗಳನ್ನು ಅವರ ಬಳಿಯಿಂದ ವಶಕ್ಕೆ ಪಡೆಯಲಾಗಿದೆ ಎಂದ ವರದಿಗಳು ತಿಳಿಸಿವೆ. ಬಂಧಿತ ವ್ಯಕ್ತಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳನ್ನು ಇಂಫಾಲ್ ಪೂರ್ವ ಜಿಲ್ಲೆಯ ಹೀಂಗಾಂಗ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪೊಲೀಸರ ಪ್ರಕಾರ, ಈಶಾನ್ಯ ರಾಜ್ಯದಲ್ಲಿ ಕೆಲವು ಸ್ಥಳಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಆದರೆ ಕಳೆದ 24 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಹೆಚ್ಚಿನ ಸ್ಥಳಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ.
ಭದ್ರತಾ ಸಿಬ್ಬಂದಿ ರಾಜ್ಯಾದ್ಯಂತ ದುರ್ಬಲ ಪ್ರದೇಶಗಳಲ್ಲಿ ನಿರಂತರವಾಗಿ ಗಸ್ತು, ಧ್ವಜ ಮೆರವಣಿಗೆ ಮತ್ತು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.