ಗುವಾಹಟಿ: ಕಳೆದ ಕೆಲವು ದಿನಗಳಿಂದ ನೆರೆ ಅಸ್ಸಾಂ ರಾಜ್ಯವನ್ನು ಇನ್ನಿಲ್ಲದ ಸಂಕಷ್ಟಕ್ಕೆ ದೂಡಿದೆ. ಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡು ನದಿಗಳು ಅಪಾಯದ ಮಟ್ಟವನ್ನು ಮೀರಿ ತುಂಬಿ ಹರಿಯುತ್ತಿವೆ. ಇದೀಗ ಅಲ್ಲಿ ಪರಿಸ್ಥಿತಿ ಕೊಂಚ ಸುಧಾರಿಸಿದರೂ ಜನರು ಮಾತ್ರ ಸಂಕಷ್ಟದಲ್ಲೇ ಇದ್ದಾರೆ.
ನಿನ್ನೆಯಿಂದ ಅಸ್ಸಾಂನಲ್ಲಿ ಉತ್ತಮ ಹವಾಮಾನದಿಂದಾಗಿ ಪ್ರವಾಹ ಪರಿಸ್ಥಿತಿಯು ಒಂದಿಷ್ಟು ಸುಧಾರಿಸುತ್ತಿದೆ ಆದರೂ 514 ಹಳ್ಳಿಗಳ 1,21,000 ಕ್ಕೂ ಹೆಚ್ಚು ಜನರು ಇನ್ನೂ 22 ಕಂದಾಯ ವಲಯಗಳಲ್ಲಿ ಪ್ರವಾಹದಲ್ಲಿ ತತ್ತರಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಬರ್ಪೇಟಾ ಜಿಲ್ಲೆಯಲ್ಲಿ ಇಂದು ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ರಾಜ್ಯದ 11 ಜಿಲ್ಲೆಗಳಲ್ಲಿ 1,21,000 ಕ್ಕೂ ಹೆಚ್ಚು ಜನರು ಇನ್ನೂ ಪ್ರವಾಹದಲ್ಲಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಅಸ್ಸಾಂನ ಪ್ರವಾಹ ಪೀಡಿತ ಜಿಲ್ಲೆಗಳೆಂದರೆ ಬಜಾಲಿ, ಬಕ್ಸಾ, ಬರ್ಪೇಟಾ, ದರ್ರಾಂಗ್, ದಿಬ್ರುಗಢ್, ಗೋಲಾಘಾಟ್, ಕಾಮ್ರೂಪ್, ಲಖಿಂಪುರ, ನಾಗಾಂವ್, ನಲ್ಬರಿ ಮತ್ತು ತಮುಲ್ಪುರ್.
ಪ್ರಸ್ತುತ 713 ಜನರು ಆಶ್ರಯ ಪಡೆದಿರುವ ಜಿಲ್ಲೆಗಳಲ್ಲಿ ಅಧಿಕಾರಿಗಳು 115 ಪರಿಹಾರ ಶಿಬಿರಗಳು ಮತ್ತು ವಿತರಣಾ ಕೇಂದ್ರಗಳನ್ನು ನಡೆಸುತ್ತಿದ್ದಾರೆ. ಒಟ್ಟು 2389 ಹೆಕ್ಟೇರ್ ಪ್ರದೇಶದ ಬೆಳೆ ಪ್ರವಾಹದ ನೀರಿನಲ್ಲಿದೆ. ಇನ್ನೊಂದೆಡೆ ಸದ್ಯ ಯಾವುದೇ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.