ಲಕ್ನೋ: ಕನ್ವರ್ ಯಾತ್ರೆಯ ಮಾರ್ಗಗಳಲ್ಲಿ ಮಾಂಸ ಮಾರಾಟವನ್ನು ರದ್ದು ಮಾಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.
ಪೊಲೀಸ್ ಕಮಿಷನರ್, ವಿಭಾಗೀಯ ಕಮಿಷನರ್, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಯೋಗಿ ಆದಿತ್ಯನಾಥ್, ಹಬ್ಬದ ಋತುಗಳಲ್ಲಿ ವಹಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ಅಲ್ಲದೇ ಕನ್ವರ್ ಯಾತ್ರೆಯ ಮಾರ್ಗದಲ್ಲಿ ಮಾಂಸ ಮಾರಾಟವನ್ನು ನಿಷೇಧಿಸುವಂತೆ ನಿರ್ದೇಶನಗಳನ್ನು ನೀಡಿದ್ದಾರೆ.
ಈ ಬಾರಿ ಅಧಿಕ ಶ್ರಾವಣ ಇರುವ ಕಾರಣಕ್ಕೆ 8 ಸೋಮವಾರಗಳು ಬರಲಿವೆ. ಶಿವಭಕ್ತರಿಗೆ ಶ್ರಾವಣ ಮಾಸ ಬಹಳ ಮುಖ್ಯ. ಈ ಅವಧಿಯಲ್ಲಿ ಶ್ರಾವಣಿ ಶಿವರಾತ್ರಿ, ನಾಗಪಂಚಮಿ, ರಕ್ಷಾಬಂಧನ ಹಬ್ಬಗಳನ್ನು ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಮುಕ್ತವಾಗಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಯೋಗಿ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಪವಿತ್ರ ಮಾಸ ಶ್ರಾವಣದಲ್ಲಿ ಜುಲೈ 4ರಿಂದ ಸಾಂಪ್ರದಾಯಿಕ ಕನ್ವರ್ ಯಾತ್ರೆ ಆರಂಭವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.