News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಳಲಂಬೆ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಸುಬ್ರಹ್ಮಣ್ಯ : ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಲಕಶೋತ್ಸವ ಜನವರಿ ತಿಂಗಳ ಅಂತ್ಯದಿಂದ ನಡೆಯಲಿದೆ.ಈ ಹಿನ್ನೆಲೆಯಲ್ಲಿ ದೇವಸ್ಥಾನದ ವಠಾರದಲ್ಲಿ ಬುಧವಾರ ಭಕ್ತಾದಿಗಳ ಸಭೆ ನಡೆದು ಬ್ರಹ್ಮಕಲಶೋತ್ಸವ ಸಮಿತಿ ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಮುಳಿಯ ತಿಮ್ಮಪ್ಪಯ್ಯ, ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ ತಳೂರು ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಬಿ.ಕೆ.ಬೆಳ್ಯಪ್ಪ ಗೌಡ ಮತ್ತು ಮಾಧವ ಮೂಕಮಲೆ ಆಯ್ಕೆಯಾದರು.

Valalambe_1

ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮುಂದಿನ ಜನವರಿ ತಿಂಗಳ ಅಂತ್ಯ ಭಾಗದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳ ಸಭೆ ದೇವಸ್ಥಾನ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಸ್ಥಾನದ ಅಭಿವೃದ್ಧಿ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವದ ಕಾರ್ಯಗಳಲ್ಲಿ ಎಲ್ಲಾ ಭಕ್ತರು ತೊಡಗಿಸಿಕೊಳ್ಳಬೇಕು.ಈಗ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಮಾಡಿ ಇಡೀ ಕಾರ್ಯಕ್ರಮ ಯಶಸ್ಸಿನ ಹಿನ್ನೆಲೆಯಲ್ಲಿ ದುಡಿಯಬೇಕಾಗಿದೆ ಎಂದರು.

ಬಳಿಕ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಕೋಶಾಧಿಕಾರಿಯಾಗಿ ಎಸ್.ಆರ್.ರಾಧಾಕೃಷ್ಣ, ಉಪಾಧ್ಯಕ್ಷರುಗಳಾಗಿ ಕಾಳಿಕಾ ಪ್ರಸಾದ್ ಮುಂಡೋಡಿ, ಹರಿಯಪ್ಪ ಗೌಡ ಕಮಿಲ, ಎ.ವಿ.ತೀರ್ಥರಾಮ, ಎಂ. ಡಿ. ವಿಜಯ ಕುಮಾರ್, ಸರೋಜಿನಿ ಗಂಗಯ್ಯ ಮುಳುಗಾಡು, ಸತ್ಯನಾರಾಯಣ ಮೊಗ್ರ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಮಹೇಶ್ ಪುಚ್ಚಪ್ಪಾಡಿ, ರಮೇಶ್ ಪಡ್ಪು,ಜಯಪ್ರಕಾಶ್ ಮೊಗ್ರ,ವಿನಯ ಕುಮಾರ್ ಮುಳುಗಾಡು ಹಾಗೂ ಸಮಿತಿ ಸದಸ್ಯರು, ಖಾಯಂ ಆಹ್ವಾನಿತ ಪ್ರಮುಖರನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಡಿ.ಎಂ.ರಾಮಣ್ಣ ಗೌಡ,ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ರಾಧಾಕೃಷ್ಣ ಮಾವಿನಕಟ್ಟೆ, ಜೀರ್ಣೋದ್ದಾರ ಸಮಿತಿ ಗೌರವ ಸಲಹೆಗಾರರಾದ ಮುಳಿಯ ತಿಮ್ಮಪ್ಪಯ್ಯ, ಚಂದ್ರಶೇಖರ ತಳೂರು, ಸತ್ಯನಾರಾಯಣ ಮೊಗ್ರ,ಜೀರ್ಣೋದ್ದಾರ ಸಮಿತಿ ಸಂಚಾಲಕ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಕಂದ್ರಪ್ಪಾಡಿ ದೈವಸ್ಥಾನದ ಆಡಳಿತ ಮೊಕ್ತೇಸರ ಕಾಳಿಕಾ ಪ್ರಸಾದ್ ಮುಂಡೋಡಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top