ನವದೆಹಲಿ: ಬಿಜೆಪಿ ಆಡಳಿತವು ದೇಶದಲ್ಲಿ ಗುಲಾಮಗಿರಿಯ ಸಂಕೇತಗಳನ್ನು ಒಂದೊಂದೇ ಆಗಿ ಕಿತ್ತೊಗೆಯುತ್ತಿದೆ. ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಐಷಾರಾಮಿ ಪ್ರದೇಶವಾದ ಲುಟ್ಯೆನ್ಸ್ ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆಯನ್ನು, ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಲಾಗಿದೆ. ಎನ್ಡಿಎಂಸಿ ಅಧಿಕಾರಿಗಳು ಬುಧವಾರ ಈ ಆದೇಶವನ್ನು ಪ್ರಕಟಿಸಿದ್ದಾರೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ ತನ್ನ ಸದಸ್ಯರ ಸಭೆಯಲ್ಲಿ ರಸ್ತೆಯ ಮರುನಾಮಕರಣಕ್ಕೆ ಅನುಮೋದನೆ ನೀಡಿತು.
NDMC ಆಗಸ್ಟ್ 2015ರಲ್ಲಿ ಔರಂಗಜೇಬ್ ರಸ್ತೆಯನ್ನು ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಿದೆ. ಈಗಾಗಲೇ ಉತ್ತರಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಮೊಘಲ್ ರಾಜರ ಹೆಸರಿನ ಸ್ಥಳಗಳಿಗೆ ಭಾರತೀಯರ ಹೆಸರನ್ನು ಮರುನಾಮರಣ ಮಾಡಲಾಗಿದೆ.
ಇತ್ತೀಚಿಗಷ್ಟೇ ಮುಂಬಯಿಯ ಅಹ್ಮದ್ ನಗರಕ್ಕೆ ಅಹಲ್ಯಾ ನಗರ ಎಂದು ಮರುನಾಮಕರಣ ಮಾಡಲಾಗಿತ್ತು. ಉತ್ತರಪ್ರದೇಶದ ಅಲಹಾಬಾದ್ಗೆ ಪ್ರಯಾಗ್ ರಾಜ್ ಎಂದು ಮರುನಾಮಕರಣ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.